ಬೆಂಗಳೂರು : ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕರ್ನಾಟಕದ ರಾಜಭವನ ಇನ್ನು ಮುಂದೆ ಭವಿಷ್ಯದಲ್ಲಿ ಲೋಕಭವನ ಎಂದು ಮರು ನಾಮಕರಣಗೊಳ್ಳಲಿದೆ.
ಈಗಾಗಲೇ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಉತ್ತರಪ್ರದೇಶ, ಉತ್ತರಖಂಡ್, ಗುಜರಾತ್ ಸೇರಿದಂತೆ ೮ ರಾಜ್ಯಗಳು ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ರಾಜಭವನವನ್ನು ಲೋಕಭವನ ಎಂದು ಬದಲಾಯಿಸಲಾಗಿದೆ.
ಈಗ ಕರ್ನಾಟಕದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ಟ್ ಅವರು ರಾಜಭವನದ ಹೆಸರನ್ನು ಬದಲಾಯಿಸಿ ಲೋಕಭವನ ಎಂದು ಮರುನಾಮಕರಣ ಮಾಡಿ ಶೀಘ್ರವೇ ಅಧಿಕೃತ ಆದೇಶವನ್ನು ಹೊರಡಿಸಲಿದ್ದಾರೆ.
ರಾಜಭವನವು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರ ವ್ಯಾಪ್ತಿಗೆ ಒಳಪಡುವುದರಿಂದ ಹೆಸರು ಬದಲಾಯಿಸಲು ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲವೇ ಅನುಮತಿ ಬೇಕಾಗಿರುವುದಿಲ್ಲ. ರಾಷ್ಟ್ರಪತಿ ಭವನದ ವ್ಯಾಪ್ತಿಗೆ ಬರುವುದರಿಂದ ಕೇಂದ್ರ ಗೃಹ ಇಲಾಖೆಯ ನಿರ್ದೇಶನವನ್ನು ಪಾಲನೆ ಮಾಡಬೇಕಾಗುತ್ತದೆ. ಈಗಾಗಲೇ ಪಶ್ಚಿಮ ಬಂಗಾಳ, ಉತ್ತರಾಖಾಂಡ್ ಕೇರಳ, ತಮಿಳುನಾಡು, ತ್ರಿಪುರಾ, ಗುಜರಾತ್ ರಾಜ್ಯಗಳಲ್ಲಿನ ರಾಜಭವನದ ಹೆಸರುಗಳನ್ನು ಬದಲಾಯಿಸಲಾಗಿದೆ.
ಏಕೆ ಈ ಬದಲಾವಣೆ?
ಈ ಮೊದಲೇ ಹೇಳಿದಂತೆ ಮೋದಿ ಸರ್ಕಾರ ಜನಸೇವೆಯ ಆಂಗಲ್ನಲ್ಲೇ ಸರ್ಕಾರಿ ಬಂಗಲೆಗಳ ಹೆಸರುಗಳನ್ನು, ರಸ್ತೆಗಳನ್ನು ಬದಲಾಯಿಸಿದೆ. ದಿಲ್ಲಿಯ ರೇಸ್ಕೋರ್ಸ್ ರಸ್ತೆಯನ್ನು ಲೋಕ ಕಲ್ಯಾಣ್ಮಾರ್ಗ್ ಎಂದು ಬದಲಾಯಿಸಿದ್ದು, ಹಳೆಯ ಸಂಸತ್ ಭವನವನ್ನು ಸಂವಿಧಾನ್ ಸದನ್ ಎಂದು ಬದಲಾಯಿಸಲಾಗಿದೆ. ಅದೇ ನಿಟ್ಟಿನಲ್ಲಿ ರಾಜಭವನದ ಹೆಸರುಗಳನ್ನು ಬದಲಾಯಿಸಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…