ರಾಜ್ಯ

ರಾಜಭವನ ಇನ್ಮುಂದೆ ಲೋಕಭವನ..!

ಬೆಂಗಳೂರು : ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕರ್ನಾಟಕದ ರಾಜಭವನ ಇನ್ನು ಮುಂದೆ ಭವಿಷ್ಯದಲ್ಲಿ ಲೋಕಭವನ ಎಂದು ಮರು ನಾಮಕರಣಗೊಳ್ಳಲಿದೆ.

ಈಗಾಗಲೇ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಉತ್ತರಪ್ರದೇಶ, ಉತ್ತರಖಂಡ್, ಗುಜರಾತ್ ಸೇರಿದಂತೆ ೮ ರಾಜ್ಯಗಳು ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ರಾಜಭವನವನ್ನು ಲೋಕಭವನ ಎಂದು ಬದಲಾಯಿಸಲಾಗಿದೆ.
ಈಗ ಕರ್ನಾಟಕದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್‌ಟ್ ಅವರು ರಾಜಭವನದ ಹೆಸರನ್ನು ಬದಲಾಯಿಸಿ ಲೋಕಭವನ ಎಂದು ಮರುನಾಮಕರಣ ಮಾಡಿ ಶೀಘ್ರವೇ ಅಧಿಕೃತ ಆದೇಶವನ್ನು ಹೊರಡಿಸಲಿದ್ದಾರೆ.

ರಾಜಭವನವು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರ ವ್ಯಾಪ್ತಿಗೆ ಒಳಪಡುವುದರಿಂದ ಹೆಸರು ಬದಲಾಯಿಸಲು ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲವೇ ಅನುಮತಿ ಬೇಕಾಗಿರುವುದಿಲ್ಲ. ರಾಷ್ಟ್ರಪತಿ ಭವನದ ವ್ಯಾಪ್ತಿಗೆ ಬರುವುದರಿಂದ ಕೇಂದ್ರ ಗೃಹ ಇಲಾಖೆಯ ನಿರ್ದೇಶನವನ್ನು ಪಾಲನೆ ಮಾಡಬೇಕಾಗುತ್ತದೆ. ಈಗಾಗಲೇ ಪಶ್ಚಿಮ ಬಂಗಾಳ, ಉತ್ತರಾಖಾಂಡ್ ಕೇರಳ, ತಮಿಳುನಾಡು, ತ್ರಿಪುರಾ, ಗುಜರಾತ್ ರಾಜ್ಯಗಳಲ್ಲಿನ ರಾಜಭವನದ ಹೆಸರುಗಳನ್ನು ಬದಲಾಯಿಸಲಾಗಿದೆ.

ಏಕೆ ಈ ಬದಲಾವಣೆ?
ಈ ಮೊದಲೇ ಹೇಳಿದಂತೆ ಮೋದಿ ಸರ್ಕಾರ ಜನಸೇವೆಯ ಆಂಗಲ್‌ನಲ್ಲೇ ಸರ್ಕಾರಿ ಬಂಗಲೆಗಳ ಹೆಸರುಗಳನ್ನು, ರಸ್ತೆಗಳನ್ನು ಬದಲಾಯಿಸಿದೆ. ದಿಲ್ಲಿಯ ರೇಸ್‌ಕೋರ್ಸ್ ರಸ್ತೆಯನ್ನು ಲೋಕ ಕಲ್ಯಾಣ್‌ಮಾರ್ಗ್ ಎಂದು ಬದಲಾಯಿಸಿದ್ದು, ಹಳೆಯ ಸಂಸತ್ ಭವನವನ್ನು ಸಂವಿಧಾನ್ ಸದನ್ ಎಂದು ಬದಲಾಯಿಸಲಾಗಿದೆ. ಅದೇ ನಿಟ್ಟಿನಲ್ಲಿ ರಾಜಭವನದ ಹೆಸರುಗಳನ್ನು ಬದಲಾಯಿಸಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago