ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್ವೆಸ್ಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಈ ದೇಶದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಹಾಗೂ ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಅನುಮಾನಗಳೆಲ್ಲಾ ನಿವಾರಣೆಯಾಗಿ ಹೋಗುತ್ತವೆ ಎಂದಿದ್ದಾರೆ.
ಕರ್ನಾಟಕ ಜ್ಞಾನ ಹಾಗೂ ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದ್ದು, ಭಾರತದ ತಂತ್ರಜ್ಞಾನದ ರಾಜಧಾನಿಯಾಗಿದೆ. ಅಲ್ಲದೇ ಈ ಬೆಂಗಳೂರಿನಲ್ಲಿ ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಹಾಗೂ ಯುವಜನರ ಆಗರವಾಗಿದೆ. ಈ ನಗರದ ಮಹತ್ತ್ವಾಕಾಂಕ್ಷೆ, ಶಕ್ತಿ ಮತ್ತು ಇಲ್ಲಿನ ನಿರ್ಣಾಯಕ ಕಾರ್ಯಗಳು ದೇಶವನ್ನು ಎತ್ತರಕ್ಕೆ ಕೊಂಡೆಯ್ಯುತ್ತಿವೆ. ಜೊತೆಗೆ ಸದ್ಯದಲ್ಲೇ ಇಲ್ಲಿಂದ ಕೃತಕ ಬುದ್ಧಿಮತ್ತೆ ಕ್ಷೇತ್ರದ ಮೊಟ್ಟ ಮೊದಲ ಮಾದರಿ ಸಹ ಹೊರಬರಲಿದೆ. ಹೀಗಾಗಿ ಇದಕ್ಕೆಲ್ಲಾ ಬೆಂಗಳೂರಿನ ಮಾನವ ಸಂಪನ್ಮೂಲ ಹಾಗೂ ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಹೇಳಿದ್ದಾರೆ.
ಇನ್ನೂ ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಪ್ರಮುಖವಾಗಿದ್ದಾರೆ. ಏಕೆಂದರೆ ಈ ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ಸಂಕಷ್ಟ ಎದುರಾಗುತ್ತಿತ್ತು. ಆದರೆ ಇದೀಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಎಂದು ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…