ರಾಜ್ಯ

ವಿಶ್ವ ದರ್ಜೆಯಲ್ಲಿಯೇ ಬೆಂಗಳೂರು ಹೂಡಿಕೆಗೆ ಹೇಳಿಮಾಡಿಸಿದ ಸ್ಥಳವಾಗಿದೆ : ರಾಜನಾಥ್‌ ಸಿಂಗ್‌

ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್‌ವೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಈ ದೇಶದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಹಾಗೂ ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಅನುಮಾನಗಳೆಲ್ಲಾ ನಿವಾರಣೆಯಾಗಿ ಹೋಗುತ್ತವೆ ಎಂದಿದ್ದಾರೆ.

ಕರ್ನಾಟಕ ಜ್ಞಾನ ಹಾಗೂ ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದ್ದು, ಭಾರತದ ತಂತ್ರಜ್ಞಾನದ ರಾಜಧಾನಿಯಾಗಿದೆ. ಅಲ್ಲದೇ ಈ ಬೆಂಗಳೂರಿನಲ್ಲಿ ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಹಾಗೂ ಯುವಜನರ ಆಗರವಾಗಿದೆ. ಈ ನಗರದ ಮಹತ್ತ್ವಾಕಾಂಕ್ಷೆ, ಶಕ್ತಿ ಮತ್ತು ಇಲ್ಲಿನ ನಿರ್ಣಾಯಕ ಕಾರ್ಯಗಳು ದೇಶವನ್ನು ಎತ್ತರಕ್ಕೆ ಕೊಂಡೆಯ್ಯುತ್ತಿವೆ. ಜೊತೆಗೆ ಸದ್ಯದಲ್ಲೇ ಇಲ್ಲಿಂದ ಕೃತಕ ಬುದ್ಧಿಮತ್ತೆ ಕ್ಷೇತ್ರದ ಮೊಟ್ಟ ಮೊದಲ ಮಾದರಿ ಸಹ ಹೊರಬರಲಿದೆ. ಹೀಗಾಗಿ ಇದಕ್ಕೆಲ್ಲಾ ಬೆಂಗಳೂರಿನ ಮಾನವ ಸಂಪನ್ಮೂಲ ಹಾಗೂ ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಹೇಳಿದ್ದಾರೆ.

ಇನ್ನೂ ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಪ್ರಮುಖವಾಗಿದ್ದಾರೆ. ಏಕೆಂದರೆ ಈ ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ಸಂಕಷ್ಟ ಎದುರಾಗುತ್ತಿತ್ತು. ಆದರೆ ಇದೀಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

8 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

10 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

11 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

12 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

13 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

13 hours ago