ರಾಜ್ಯ

ವಿಶ್ವ ದರ್ಜೆಯಲ್ಲಿಯೇ ಬೆಂಗಳೂರು ಹೂಡಿಕೆಗೆ ಹೇಳಿಮಾಡಿಸಿದ ಸ್ಥಳವಾಗಿದೆ : ರಾಜನಾಥ್‌ ಸಿಂಗ್‌

ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್‌ವೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಈ ದೇಶದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಹಾಗೂ ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಅನುಮಾನಗಳೆಲ್ಲಾ ನಿವಾರಣೆಯಾಗಿ ಹೋಗುತ್ತವೆ ಎಂದಿದ್ದಾರೆ.

ಕರ್ನಾಟಕ ಜ್ಞಾನ ಹಾಗೂ ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದ್ದು, ಭಾರತದ ತಂತ್ರಜ್ಞಾನದ ರಾಜಧಾನಿಯಾಗಿದೆ. ಅಲ್ಲದೇ ಈ ಬೆಂಗಳೂರಿನಲ್ಲಿ ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಹಾಗೂ ಯುವಜನರ ಆಗರವಾಗಿದೆ. ಈ ನಗರದ ಮಹತ್ತ್ವಾಕಾಂಕ್ಷೆ, ಶಕ್ತಿ ಮತ್ತು ಇಲ್ಲಿನ ನಿರ್ಣಾಯಕ ಕಾರ್ಯಗಳು ದೇಶವನ್ನು ಎತ್ತರಕ್ಕೆ ಕೊಂಡೆಯ್ಯುತ್ತಿವೆ. ಜೊತೆಗೆ ಸದ್ಯದಲ್ಲೇ ಇಲ್ಲಿಂದ ಕೃತಕ ಬುದ್ಧಿಮತ್ತೆ ಕ್ಷೇತ್ರದ ಮೊಟ್ಟ ಮೊದಲ ಮಾದರಿ ಸಹ ಹೊರಬರಲಿದೆ. ಹೀಗಾಗಿ ಇದಕ್ಕೆಲ್ಲಾ ಬೆಂಗಳೂರಿನ ಮಾನವ ಸಂಪನ್ಮೂಲ ಹಾಗೂ ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಹೇಳಿದ್ದಾರೆ.

ಇನ್ನೂ ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಪ್ರಮುಖವಾಗಿದ್ದಾರೆ. ಏಕೆಂದರೆ ಈ ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ಸಂಕಷ್ಟ ಎದುರಾಗುತ್ತಿತ್ತು. ಆದರೆ ಇದೀಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago