ರಾಜ್ಯ

ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆ ಹೆಚ್ಚಿಸುವ ಗುರಿ: ರಾಜನಾಥ್‌ ಸಿಂಗ್‌

ಬೆಂಗಳೂರು: ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಭಾಗೀದಾರಿಕೆಯನ್ನು ಕೇಂದ್ರ ಸರ್ಕಾರ ಉತ್ತೇಜಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ನಡೆಯುತ್ತಿರುವ ಏರೋ ಇಂಡಿಯಾ 2025ರ ಸಿಇಒ ದುಂಡು ಮೇಜಿನ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ರಕ್ಷಣಾ ಕೈಗಾರಿಕಾ ವ್ಯವಸ್ಥೆಯ ಉತ್ಪನ್ನಗಳ ಬಳಕೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಅಲ್ಲದೇ ಈ ಉತ್ಪನ್ನಗಳ ತಯಾರಿಕೆಗೆ ಹಾಗೂ ರಫ್ತಿಗೆ ಅನುಮತಿ ನೀಡುತ್ತದೆ ಎಂದರು.

ಭಾರತವನ್ನು 2047ರ ವೇಳೆಗೆ ಅಭಿವೃದ್ಧಿ ಹೊಂದುತ್ತಿರುವ ದೇಶದಿಂದ, ಅಭಿವೃದ್ಧಿ ಹೊಂದಿದ ದೇಶಕ್ಕೆ ಪರಿವರ್ತನೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಹಾಗಾಗಿ ಅದಕ್ಕೆ ಪೂರಕವಾಗಿ ತಮ್ಮ ರಕ್ಷಣಾ ಉದ್ಯಮವನ್ನು ಒಟ್ಟಾರೆ ರಾಷ್ಟ್ರೀಯ ಆರ್ಥಿಕತೆಯ ಮುಖ್ಯ ಪಾಲುದಾರ ಕ್ಷೇತ್ರವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಹಲವು ಪರಿವರ್ತಕ ಕ್ರಮಗಳನ್ನು ತೆಗೆದುಕೊಂಡಿದಡ ಎಂದು ಹೇಳಿದರು.

ಇನ್ನೂ ರಕ್ಷಣಾ ಕ್ಷೇತ್ರದಲ್ಲಿ ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಪರಿಕಲ್ಪನೆಯನ್ನು ಉತ್ತೇಜಿಸಲು ಹಾಗೂ ರಕ್ಷಣಾ ವಲಯಕ್ಕೆ ಹಣಕಾಸಿನ ನೆರವು ನೀಡಲು, ರಕ್ಷಣಾ ಪರೀಕ್ಷಾ ಮೂಲಸೌಕರ್ಯ ಯೋಜನೆಯನ್ನು ಪರಿಚಯಿಸಲಾಗಿದೆ. ಭಾರತವು ರಕ್ಷಣಾ ರಫ್ತು ವಹಿವಾಟವು 2013-14ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಕಳೆದ 10 ವರ್ಷಗಳಲ್ಲಿ ಶೇ. 31 ಪಟ್ಟು ಬೆಳವಣಿಗೆಯನ್ನು ಕಂಡಿದೆ ಎಂದು ಮಾಹಿತಿ ನೀಡಿದರು.

ವಿಶ್ವದಲ್ಲಿ ಆಧುನಿಕ ಯುದ್ಧದ ಸ್ವರೂಪವು ವೇಗವಾಗಿ ಬದಲಾಗುತ್ತಿರುವುದರಿಂದ, ನಾವು ಇದಕ್ಕೆ ಪರಿಹಾರಗಳನ್ನು ಸಹ ಅಷ್ಟೇ ವೇಗವಾಗಿ ಅಳವಡಿಸಿಕೊಳ್ಳಬೇಕು. ಜೊತೆಗೆ ಶುದ್ಧ ಹಾರ್ಡ್‌ವೇರ್ ಆಧಾರಿತ ಸಿಸ್ಟಮ್‌ ಮೇಲೆ ಅವಲಂಬಿತವಾಗಿದ್ದ ಈ ಮೊದಲಿನ ಯುದ್ಧ ವ್ಯವಸ್ಥೆಯು, ಇದೀಗ ಸಾಫ್ಟ್‌ವೇರ್ ಆಧಾರಿತ ವ್ಯವಸ್ಥೆಗಳಿಗೆ ಒಗ್ಗಿಕೊಳ್ಳುತ್ತಿದೆ. ಹೀಗಾಗಿ ಬಾಹ್ಯಾಕಾಶ-ಆಧಾರಿತ ಸಂಚರಣೆ ವ್ಯವಸ್ಥೆ, ಬಾಹ್ಯಾಕಾಶ-ಆಧಾರಿತ ಸಂವಹನ ಮತ್ತು ಕಣ್ಗಾವಲು ವ್ಯವಸ್ಥೆಯೇ ನಮ್ಮ ಕಾರ್ಯಾಚರಣೆಯ ಭಾಗವಾಗಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

21 mins ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

37 mins ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

57 mins ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

2 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

2 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

3 hours ago