ರಾಜ್ಯ

ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆ ಹೆಚ್ಚಿಸುವ ಗುರಿ: ರಾಜನಾಥ್‌ ಸಿಂಗ್‌

ಬೆಂಗಳೂರು: ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಭಾಗೀದಾರಿಕೆಯನ್ನು ಕೇಂದ್ರ ಸರ್ಕಾರ ಉತ್ತೇಜಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ನಡೆಯುತ್ತಿರುವ ಏರೋ ಇಂಡಿಯಾ 2025ರ ಸಿಇಒ ದುಂಡು ಮೇಜಿನ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ರಕ್ಷಣಾ ಕೈಗಾರಿಕಾ ವ್ಯವಸ್ಥೆಯ ಉತ್ಪನ್ನಗಳ ಬಳಕೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಅಲ್ಲದೇ ಈ ಉತ್ಪನ್ನಗಳ ತಯಾರಿಕೆಗೆ ಹಾಗೂ ರಫ್ತಿಗೆ ಅನುಮತಿ ನೀಡುತ್ತದೆ ಎಂದರು.

ಭಾರತವನ್ನು 2047ರ ವೇಳೆಗೆ ಅಭಿವೃದ್ಧಿ ಹೊಂದುತ್ತಿರುವ ದೇಶದಿಂದ, ಅಭಿವೃದ್ಧಿ ಹೊಂದಿದ ದೇಶಕ್ಕೆ ಪರಿವರ್ತನೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಹಾಗಾಗಿ ಅದಕ್ಕೆ ಪೂರಕವಾಗಿ ತಮ್ಮ ರಕ್ಷಣಾ ಉದ್ಯಮವನ್ನು ಒಟ್ಟಾರೆ ರಾಷ್ಟ್ರೀಯ ಆರ್ಥಿಕತೆಯ ಮುಖ್ಯ ಪಾಲುದಾರ ಕ್ಷೇತ್ರವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಹಲವು ಪರಿವರ್ತಕ ಕ್ರಮಗಳನ್ನು ತೆಗೆದುಕೊಂಡಿದಡ ಎಂದು ಹೇಳಿದರು.

ಇನ್ನೂ ರಕ್ಷಣಾ ಕ್ಷೇತ್ರದಲ್ಲಿ ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಪರಿಕಲ್ಪನೆಯನ್ನು ಉತ್ತೇಜಿಸಲು ಹಾಗೂ ರಕ್ಷಣಾ ವಲಯಕ್ಕೆ ಹಣಕಾಸಿನ ನೆರವು ನೀಡಲು, ರಕ್ಷಣಾ ಪರೀಕ್ಷಾ ಮೂಲಸೌಕರ್ಯ ಯೋಜನೆಯನ್ನು ಪರಿಚಯಿಸಲಾಗಿದೆ. ಭಾರತವು ರಕ್ಷಣಾ ರಫ್ತು ವಹಿವಾಟವು 2013-14ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಕಳೆದ 10 ವರ್ಷಗಳಲ್ಲಿ ಶೇ. 31 ಪಟ್ಟು ಬೆಳವಣಿಗೆಯನ್ನು ಕಂಡಿದೆ ಎಂದು ಮಾಹಿತಿ ನೀಡಿದರು.

ವಿಶ್ವದಲ್ಲಿ ಆಧುನಿಕ ಯುದ್ಧದ ಸ್ವರೂಪವು ವೇಗವಾಗಿ ಬದಲಾಗುತ್ತಿರುವುದರಿಂದ, ನಾವು ಇದಕ್ಕೆ ಪರಿಹಾರಗಳನ್ನು ಸಹ ಅಷ್ಟೇ ವೇಗವಾಗಿ ಅಳವಡಿಸಿಕೊಳ್ಳಬೇಕು. ಜೊತೆಗೆ ಶುದ್ಧ ಹಾರ್ಡ್‌ವೇರ್ ಆಧಾರಿತ ಸಿಸ್ಟಮ್‌ ಮೇಲೆ ಅವಲಂಬಿತವಾಗಿದ್ದ ಈ ಮೊದಲಿನ ಯುದ್ಧ ವ್ಯವಸ್ಥೆಯು, ಇದೀಗ ಸಾಫ್ಟ್‌ವೇರ್ ಆಧಾರಿತ ವ್ಯವಸ್ಥೆಗಳಿಗೆ ಒಗ್ಗಿಕೊಳ್ಳುತ್ತಿದೆ. ಹೀಗಾಗಿ ಬಾಹ್ಯಾಕಾಶ-ಆಧಾರಿತ ಸಂಚರಣೆ ವ್ಯವಸ್ಥೆ, ಬಾಹ್ಯಾಕಾಶ-ಆಧಾರಿತ ಸಂವಹನ ಮತ್ತು ಕಣ್ಗಾವಲು ವ್ಯವಸ್ಥೆಯೇ ನಮ್ಮ ಕಾರ್ಯಾಚರಣೆಯ ಭಾಗವಾಗಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

2 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

2 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

2 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

2 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

2 hours ago