ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.
ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ?. ಈ ಬಗ್ಗೆ ಇಂದೇ ಉತ್ತರ ಕೊಡಿ. ಇದರ ಹಿಂದೆ ಒಂದು ಷಡ್ಯಂತ್ರ ಇದೆ. ಪಿತೂರಿಯೂ ಇದೆ ಎಂದು ಗುಡುಗಿದರು.
ಇನ್ನು ಶಾಸಕ ಸುನೀಲ್ ಕುಮಾರ್ ಮಾತನಾಡಿ, ಆ ಪಿತೂರಿ, ಷಡ್ಯಂತ್ರ ಮಾಡಿದವರು ಯಾರು ಎಂದು ಹೇಳಿ ಎಂದು ಆಡಳಿತ ಪಕ್ಷದ ನಾಯಕರಿಗೆ ಆಗ್ರಹಿಸಿದರು.





