ಹೊಸದಿಲ್ಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೊಸದಿಲ್ಲಿಯಲ್ಲಿ ನ. 21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಇದು ಸಹಜವಾಗಿ ಕರ್ನಾಟಕದ ರಾಜಕಾರಣದಲ್ಲಿ ಕುತೂಹಲ ಎಬ್ಬಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಮತ್ತಿತರ ಕೂಗಿನ ನಡುವೆ ರಾಜಣ್ಣ ಪುತ್ರನ ದೆಹಲಿ ಪ್ರಯಾಣ ಹಾಗೂ ದಿಢೀರನೆ ಅಮಿತ್ ಶಾ ಅವರ ಭೇಟಿ ಸಹಜವಾಗಿಯೇ ಕುತೂಹಲ ಕೆರಳಿಸಿದೆ.





