ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯ ದೃಢಪಡಿಸಿದೆ. ನಾಯಿ ಮಾಂಸ ಎಂಬುದಾಗಿ ದುರುದ್ದೇಶದಿಂದ ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಿಡಿಕಾರಿದರು.
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ಮಾಂಸ ಮಾರಾಟ ಮಾಡುತ್ತಾರೆ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂದು ವರದಿಯಲ್ಲಿ ದೃಢವಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಬೆಂಗಳೂರಿಗೆ ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲವರು ಆರೋ ಮಾಡಿದ್ದರು. ಇದರಿಂದ ಎಚ್ಚೆತ್ತ ಆಹಾರ ಇಲಾಖೆ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿ, ಕೋಲ್ಡ್ ಸ್ಟೋರೇಜ್ನಲ್ಲಿದ್ದ ಮತ್ತು ಅಂಗಡಿಗಳಲ್ಲಿ ಇದ್ದ ಮಾಂಸಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು. ಇಂದು ಪರೀಕ್ಷೆ ವರದಿ ಬಂದಿದ್ದು, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ದೃಢವಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…