ರಾಜ್ಯ

ತಂತ್ರಜ್ಞಾನ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು‌ : ದೇಶದ ಯುವಕರಿಗೆ ಹದಿನೆಂಟನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇಂದು ಏರ್ಪಡಿಸಿದ್ದ ರನ್ ಫಾರ್ ರಾಜೀವ್ ಮ್ಯಾರಥಾನ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಕೂಡ ಚಿಕ್ಕ ವಯಸ್ಸಿನಲ್ಲಿ 10-15 ಕಿ.ಮೀ. ಓಡುತ್ತಿದ್ದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ರಾಜೀವ್ ಗಾಂಧಿ ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ನಮ್ಮ ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗಿತ್ತು. ಅದನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಈ ನಿರ್ಧಾರವನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು. ಅದಕ್ಕೆ ರಾಜೀವ್ ಗಾಂಧಿ ಅವರು ನಾವು 16ನೇ ವಯಸ್ಸಿಗೆ ಎಸ್‍ಎಸ್‍ಎಲ್‍ಸಿ ಪಾಸಾದ ಯುವಕರನ್ನು ದೇಶದ ಗಡಿ ಕಾಯಲು ಸೇನೆಗೆ ನೇಮಿಸುತ್ತೇವೆ. ಅದೇ ರೀತಿ ಪ್ರಜಾಪ್ರಭುತ್ವ ಕಾಯಲು ಅವರಿಗೆ ಮತದಾನದ ಹಕ್ಕು ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯ್ತಿಯಿಂದ ಪಾರ್ಲಿಮೆಂಟ್‍ವರೆಗೂ ಜನಪ್ರತಿನಿಧಿಗಳು ಆಯ್ಕೆ ಆಗಬೇಕು ಎಂದು ಹೇಳಿದರು.

ನಾನು ವಿದ್ಯಾರ್ಥಿಯಾಗಿದ್ದಾಗ ಎನ್‍ಎಸ್‍ಯುಐ ನಾಯಕನಾಗಿದ್ದೆ. ಆಗ ನಮ ಬಳಿ ಫೋನ್ ಇರಲಿಲ್ಲ. ಲ್ಯಾಂಡ್‍ಲೈನ್ ಸಂಪರ್ಕ ಪಡೆಯಲು 3-4 ವರ್ಷ ಕಾಯಬೇಕಿತ್ತು. ತಂತ್ರಜ್ಞಾನ ಕ್ರಾಂತಿ ಮೂಲಕ ಇಂದು ನಿಮೆಲ್ಲರ ಕೈಗೆ ಮೊಬೈಲ್ ಬರುವಂತೆ ಮಾಡಿರುವುದೇ ರಾಜೀವ್ ಗಾಂಧಿ. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಧೀಮಂತ ನಾಯಕರ ನೆನಪಲ್ಲಿ ನೀವು ಹೆಜ್ಜೆ ಹಾಕಲು ಬಂದಿದ್ದೀರಿ. ನಿಮಗೆ ಅಭಿನಂದನೆಗಳು ಎಂದು ಹೇಳಿದರು.

ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ ಎಂಬ ಶ್ಲೋಕದ ಆಶಯದಂತೆ ನಿಮೆಲ್ಲರಿಗೂ ಮಂಗಳವಾಗಲಿ, ಆರೋಗ್ಯ, ಐಶ್ವರ್ಯ ನಿಮದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು. ಬೆಂಗಳೂರು ಈಗ ಗ್ರೇಟರ್ ಬೆಂಗಳೂರು ಆಗಿದೆ. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಬೆಂಗಳೂರಿನ ಮೂಲಕ ನೋಡಲಾಗುತ್ತಿದೆ ಎಂದಿದ್ದರು.

ಇದು ಸಾಧ್ಯವಾಗಿದ್ದು ನಿಮೆಲ್ಲರಿಂದ ಎಂದು ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ಅವರ ನೆನಪಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಯುವಕರು ಭಾಗವಹಿಸಿದ್ದು, ನಮ ಯುವ ನಾಯಕರು ಈ ಕಾರ್ಯಕ್ರಮ ಆಯೋಜಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

6 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

9 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

13 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

17 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

17 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

17 hours ago