ರಾಜ್ಯ

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ.

ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು (ಜನವರಿ 30) ಆರೋಪಿ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿ ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಬೆಂಬಲಿಗರಿಗೆ ತಾಕೀತು ಮಾಡಲಾಗಿದೆ.

ಘಟನೆ ಹಿನ್ನೆಲೆ
ಶಿಡ್ಲಘಟ್ಟದಲ್ಲಿ ಅನಧಿಕೃತ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಅಸಮಾಧಾನಗೊಂಡ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪವಿತ್ತು. ಈ ಪ್ರಕರಣದಲ್ಲಿ ಶಿಡ್ಲಘಟ್ಟ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ರಾಜೀವ್ ಗೌಡ ಅವರು ಘಟನೆಯ ನಂತರ ತಲೆಮರೆಸಿಕೊಂಡಿದ್ದು, ಕೇರಳ ಗಡಿಯಲ್ಲಿ ಬಂಧನಕ್ಕೊಳಗಾಗಿದ್ದರು. ಮೊದಲು ಜಾಮೀನು ಅರ್ಜಿ ವಜಾಗೊಂಡು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದರು. ನಂತರದ ವಿಚಾರಣೆಯಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago