ರಾಜ್ಯ

ಮಣ್ಣಲ್ಲಿ ಮಣ್ಣಾದ ರಾಜು ತಾಳಿಕೋಟೆ: ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ.

ಹಾಸ್ಯನಟ, ರಂಗಾಯನ ನಿರ್ದೇಶಕ ರಾಜು ತಾಳಿಕೋಟೆಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ರಾಜು ತಾಳಿಕೋಟೆ ಅಂತಿಮ ದರ್ಶನವನ್ನು ಧಾರವಾಡ ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಅನೇಕ ಕಲಾವಿದರು ಅಂತಿಮ ದರ್ಶನ ಪಡೆದುಕೊಂಡರು. ಇನ್ನು ಪಾರ್ಥಿವ ಶರೀರದ ಎದುರು ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದರು.

ಇದನ್ನು ಓದಿ: ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

ತಾಳಿಕೋಟೆಯ ಧಾರವಾಡದಿಂದ ವಿಜಯಪುರಕ್ಕೆ ಕೊಂಡೊಯ್ದ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆ ವೇಳೆ ಮೃತ ಕುಟುಂಬಸ್ಥರ ಕಣ್ಣೀರು ಮುಗಿಲು ಮುಟ್ಟಿತ್ತು.

ಇಡೀ ಕನ್ನಡ ಚಿತ್ರರಂಗವನ್ನು ಮತ್ತು ರಂಗಭೂಮಿಯನ್ನು ನಗುವಿನ ನಶೆಯಲ್ಲಿ ತೇಲಿಸುತ್ತಿದ್ದ ರಾಜು ತಾಳಿಕೋಟೆಯ ಸಾವು ನಿಜಕ್ಕೂ ಬರಸಿಡಿಲು ಬಡಿದಂತಾಗಿದೆ. ರಂಗಭೂಮಿಗೆ ಇವರ ಸಾವು ತುಂಬಲಾರದ ನಷ್ಟವಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 mins ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

1 hour ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

3 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

6 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

7 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

13 hours ago