ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ.
ಹಾಸ್ಯನಟ, ರಂಗಾಯನ ನಿರ್ದೇಶಕ ರಾಜು ತಾಳಿಕೋಟೆಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ರಾಜು ತಾಳಿಕೋಟೆ ಅಂತಿಮ ದರ್ಶನವನ್ನು ಧಾರವಾಡ ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಅನೇಕ ಕಲಾವಿದರು ಅಂತಿಮ ದರ್ಶನ ಪಡೆದುಕೊಂಡರು. ಇನ್ನು ಪಾರ್ಥಿವ ಶರೀರದ ಎದುರು ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದರು.
ಇದನ್ನು ಓದಿ: ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ
ತಾಳಿಕೋಟೆಯ ಧಾರವಾಡದಿಂದ ವಿಜಯಪುರಕ್ಕೆ ಕೊಂಡೊಯ್ದ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆ ವೇಳೆ ಮೃತ ಕುಟುಂಬಸ್ಥರ ಕಣ್ಣೀರು ಮುಗಿಲು ಮುಟ್ಟಿತ್ತು.
ಇಡೀ ಕನ್ನಡ ಚಿತ್ರರಂಗವನ್ನು ಮತ್ತು ರಂಗಭೂಮಿಯನ್ನು ನಗುವಿನ ನಶೆಯಲ್ಲಿ ತೇಲಿಸುತ್ತಿದ್ದ ರಾಜು ತಾಳಿಕೋಟೆಯ ಸಾವು ನಿಜಕ್ಕೂ ಬರಸಿಡಿಲು ಬಡಿದಂತಾಗಿದೆ. ರಂಗಭೂಮಿಗೆ ಇವರ ಸಾವು ತುಂಬಲಾರದ ನಷ್ಟವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…