ರಾಜ್ಯ

ರ‍್ಯಾಲಿ ಆಫ್‌ ಬೆಂಗಳೂರು : ನಾಳೆ ಫೈನಲ್‌

ಬೆಂಗಳೂರು : ವಿಜಯನಗರ ಆಟೋಮೋಟಿವ್ ಸ್ಪೋರ್ಟ್ಸ್ ಅಸೋಸಿಯೇಷನ್ (VASA), ಎಫ್‌.ಎಂ.ಎಸ್‌.ಸಿ.ಐ ಹಾಗೂ ಇಂಡಿಯಾ ಮೋಟಾರ್ ಸ್ಪೋರ್ಟ್ಸ್‌ನ ವತಿಯಿಂದ ಇಂದಿನಿಂದ(ಜೂ.21) ರ‍್ಯಾಲಿ ಆಫ್‌ ಬೆಂಗಳೂರು ನಡೆಯುತ್ತಿದ್ದು, ನಾಳೆ ಫೈನಲ್‌ ಹಣಾಹಣೆ ಇರಲಿದೆ.

ಜೂನ್ 21 ಮತ್ತು 22ರಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಶಕ್ತಿ ಹಿಲ್ ರೆಸಾರ್ಟ್‌ನಲ್ಲಿ ನಡೆಯುತ್ತಿದೆ . ಜೆಕೆ ಟೈರ್ ಮೋಟಾರ್ ಸ್ಪೋರ್ಟ್ ಮತ್ತು ವಂಸಿ ಮೆರ್ಲಾ ಸ್ಪೋರ್ಟ್ಸ್ ಫೌಂಡೇಶನ್‌ನ ಬೆಂಬಲದಿಂದ ಅನೇಕ ಸ್ಪರ್ಧಿಗಳು ಪಾಲ್ಗೊಳ್ಳುತ್ತಿದ್ದಾರೆ.

ರ‍್ಯಾಲಿ ಆಫ್ ಬೆಂಗಳೂರು ಸ್ಪರ್ಧಿಗಳ ಪಟ್ಟಿಯನ್ನು INTSDRC-1 (ಒವರ್‌ಆಲ್), INTSDRC-2, ಪ್ರೊ ಸ್ಟಾಕ್, ವುಮೆನ್ಸ್, ಕಪಲ್ (INTSDRC-C), ಮತ್ತು ಕಾರ್ಪೊರೇಟ್ (INTSDRC-Corp) ವರ್ಗಗಳು ಸೇರಿವೆ.

ರ‍್ಯಾಲಿಯಲ್ಲಿ ಭಾಗವಹಿಸುತ್ತಿರುವ ಚಾಲಕರು ಮತ್ತು ಸಿಬ್ಬಂದಿಗೆ ಸಮಗ್ರ ವೈದ್ಯಕೀಯ ನೆರವನ್ನು ಒದಗಿಸಲು ನ್ಯಾನೋ ಆಸ್ಪತ್ರೆಗಳು ಮತ್ತು ಟ್ರೂಸ್ಕ್ಯಾನ್ ಡಯಾಗ್ನೋಸ್ಟಿಕ್ಸ್ ಆರೋಗ್ಯ ಸಂಸ್ಥೆಗಳು ನೆರವಾಗುತ್ತಿವೆ. ಜೊತೆಗೆ ಕೆಫೆ ಪೆಟ್ರಿಕ್ಕೋರ್, ಆಕ್ಟೇನ್‌ಪಿಟ್ಸ್ ಮತ್ತು ಗಿಗಾಬೈಟ್ ಇಂಕ್ (ಟೆಕ್ ಪಾರ್ಟ್‌ನರ್) ಮುಂತಾದ ಪ್ರಮುಖ ಸಹಯೋಗಿಗಳೂ ರ‍್ಯಾಲಿಗೆ ಬೆಂಬಲ ನೀಡುತ್ತಿವೆ.

ದೇಶದ ಅತಿಪುರಾತನ ಮೋಟಾರ್ ಸ್ಪೋರ್ಟ್ಸ್ ಸಂಸ್ಥೆಗಳಲ್ಲಿ ಒಂದಾದ ವಿಜಯನಗರ ಆಟೋಮೋಟಿವ್ ಸ್ಪೋರ್ಟ್ಸ್ ಅಸೋಸಿಯೇಷನ್ (VASA) ಈ ವರ್ಷ ತನ್ನ 30ನೇ ವರ್ಷದ ಸಂಭ್ರಮದಲ್ಲಿದ್ದು, ಈ ರ‍್ಯಾಲಿ ಸಂಸ್ಥೆಯ ಪರಂಪರೆಯ ಹೆಮ್ಮೆಗೂ ಸಾಕ್ಷಿಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

5 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

5 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

5 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

5 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

6 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

6 hours ago