ರಾಜ್ಯ

ಹಾರೋಹಳ್ಳಿಯಲ್ಲಿ ರಾಮ ಮಂದಿರ; ಜನವರಿ 22ಕ್ಕೆ ಭೂಮಿ ಪೂಜೆ: ಶಾಸಕ ಜಿಟಿಡಿ

ಮೈಸೂರು: ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಿಂದ ನಿರ್ಮಿಸಲಾಗಿದೆ. ಈ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಬಾಲರಾಮನ ಮೂರ್ತಿ ಕೆತ್ತನೆಗೆ ಬಳಸಲಾದ ಕಪ್ಪುಶಿಲೆ ಸಿಕ್ಕ ಜಾಗದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುತ್ತೇವೆ. ರಾಮಮಂದಿರ ಉದ್ಘಾಟನಾ ದಿನದಂದೇ ಹಾರೋಹಳ್ಳಿಯಲ್ಲಿ ರಾಮ ಮಂದಿರ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.


ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಮ್ಮ ಕ್ಷೇತ್ರದ ಗ್ರಾಮದಲ್ಲೇ ಕೃಷ್ಣ ಶಿಲೆ ಸಿಕ್ಕಿದೆ. ಆ ಶಿಲೆಯಿಂದ ಮೂಡಿಬಂದ ಶ್ರೀರಾಮ ಮೂರ್ತಿ ದರ್ಶನ ಪ್ರಪಂಚದಾದ್ಯಂತ ಶಾಶ್ವತವಾಗಿದೆ. ಇಂತಹ ಅವಕಾಶ ಲಭಿಸಿರುವುದಕ್ಕೆ ನಾನು ಸೌಭಾಗ್ಯವಂತ ಎಂದು ಜಿಟಿಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಜಾಗ ಸಿಕ್ಕ ಸ್ಥಳದ 4 ಗುಂಟೆ ಜಮೀನನ್ನು ಮಂದಿರ ನಿರ್ಮಾಣಕ್ಕೆ ಸಂತೋಷದಿಂದ ಕೊಡುವುದಾಗಿ ಜಮೀನು ಮಾಲೀಕ ರಾಮದಾಸ್ ಹೇಳಿದ್ದಾರೆ. ಜಮೀನಿನ ಮಾಲೀಕ ದಲಿತ ಸಮುದಾಯದವರು. ಇವರು ರಾಮಮಂದಿರಕ್ಕೆ ಸ್ಥಳ ನೀಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ದಿನದಂದೇ ಮೈಸೂರಿನಲ್ಲಿ ಶಿಲೆ ಸಿಕ್ಕ ಜಾಗದಲ್ಲಿ ಭೂಮಿಪೂಜೆ ಮಾಡಲಾಗುವುದು. ಮೂರ್ತಿ ಕೆತ್ತನೆಗೆ ಅರುಣ್‌ ಯೋಗಿರಾಜ್‌ ಅವರನ್ನೇ ಸಂಪರ್ಕಿ, ಅವರ ನಿರ್ದೇಶನದಂತೆಯೇ ನಡೆಯುತ್ತೇವೆ. ರಾಮಲಲ್ಲಾ ವಿಗ್ರಹಕ್ಕೆ ಶಿಲೆ ಸಿಕ್ಕ ಜಮೀನು ಮಾಲೀಕ, ಶೀಲೆ ಹೊರ ತೆಗೆದ ಶ್ರೀನಿವಾಸ್‌ ಮತ್ತು ಜೊತೆಗಾರರನ್ನು ಅಯೋಧ್ಯೆಗೆ ಕಳುಹಿಸುತ್ತೇವೆ ಎಂದು ಶಾಸಕ ಜಿಟಿ ದೇವೆಗೌಡ ಹೇಳಿದ್ದಾರೆ.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago