ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯ ಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಕ್ಕಳ ಬಾಯಲ್ಲಿ ರಾಮಮಂದಿರ ಒಡೆಯುತ್ತೇವೆ ಎಂಬ ಮಾತು ಬರುತ್ತಿವೆ. ಆ ಸಮಾಜದ ಮಕ್ಕಳ ಪೋಷಕರು ಇದಕ್ಕೆ ತಡೆ ಹಾಕಬೇಕು ಇದು ಸರಿಯಲ್ಲಾ. ದೇಶದಲ್ಲಿ ಎಲ್ಲ ಸಮಾಜದವರು ಧರ್ಮದವರು ಏಕತೆಯಿಂದ ಇರಬೇಕು ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸನ್ನಿಹಿತವಾಗಿದೆ, ದೇಶ ವಿದೇಶದ ಜನರು ಕೈಜೋಡಿಸಿದ್ದಾರೆ. ಮಂದಿರದ ಉದ್ಘಾಟನೆ ಮಂದಿರದಲ್ಲೇ ಆಗಬೇಕು ಆದ್ದರಿಂದ ಸೀಮಿತ ಜನರಿಗೆ ಮಾತ್ರ ಕರೆಯಲಾಗಿದೆ. ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್ಲರಿಗೂ ಪಾಲ್ಗೊಳ್ಳಲು ಸಾಧ್ಯವಾಗಲ್ಲ.
ಪೂಜೆ, ಅಭಿಷೇಕ, ಯಜ್ಞ-ಯಾಗ ಎಲ್ಲ ದೇವಸ್ಥಾನಗಳಲ್ಲಿ ನಡೆಯಬೇಕು. ಹಾಗಾಗಿ ರಾಮಭಕ್ತರು ತಮ್ಮ ತಮ್ಮ ಊರುಗಳಲ್ಲಿ ಉತ್ಸವ ಆಚರಣೆ ಮಾಡಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…