ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ ಎಂದರು.
ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಹೋಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೆ ಸಂಬಂಧವಿಲ್ಲ. ರಾಮ ಮಂದಿರ ನಿಜವಾದ ರಾಮ ರಾಜ್ಯದ ಕನಸು ಎಂದು ಹೇಳಿದರು.
ಕಳೆದ ಬಾರಿಯ ಲೋಕಸಭೆ ಚುನಾವಣೆ ಬೇರೆ. ಈ ಚುನಾವಣೆ ಬೇರೆ ಇರುತ್ತದೆ. ಇವತ್ತು ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ.
ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲ ಎಂದು ಹೇಳಿದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…