ರಾಜ್ಯ

ರಾಮ ಮಂದಿರ ಲೋಕಾರ್ಪಣೆ – ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಡಲು ಸಿಎಂ ಮನವಿ!

ಬೆಂಗಳೂರು: ಅಯೋಧ್ಯ ರಾಮ ಮಂದಿರ ಉದ್ಘಾಟನೆ ಹಿನ್ನಲೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಜಿಕ ಜಾಳತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ʼಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು.

ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಹೇಳಿದ್ದಾರೆ.

ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ.

ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ. ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ.

ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ. ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು.

ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆʼ ಎಂದು ತಿಳಿಸಿದ್ದಾರೆ. 

 

 

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago