ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ. ಆದರೆ, ಎಲ್ಲರಿಗೂ ಇದರ ಬಗ್ಗೆ ಜಾಣ ಮರೆವಿರುವುದು ಯಾಕೆ ಎಂದು ಸಚಿವ ರಾಮಲಿಂಗರ ರೆಡ್ಡಿ ಪ್ರಶ್ನಸಿದ್ದಾರೆ.
ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಗಿವೆ. ಇಷ್ಟು ವರ್ಷಗಳ ಕಾಲದಲ್ಲಿ ಲಕ್ಷಾಂತರ ದೇವಾಲಗಳು ನಿರ್ಮಾಣವಾಗಿದೆ. ಪ್ರಭು ಶ್ರೀರಾಮ ಎಲ್ಲರಿಗೂ ಆಶೀರ್ವದಿಸಲಿ ಎಂದರು.
ಮುಜರಾಯಿ ದೇವಾಲಯಗಳಲ್ಲಿ ರಾಮ ಮಂದಿರ ಉದ್ಘಾಟನಾ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಲಾಗಿತ್ತು. ಅದರಂತೆಯೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದೆ. ಈ ಕಾರ್ಯಕ್ರಮಗಳಿಗೆ ಬಿಜೆಪಿ ನಾಯಕರನ್ನು ಕೇಳಿ ಆದೇಶ ನೀಡಿಲ್ಲ ಎಂದು ಕಿಡಿಕಾರಿದರು.
ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ದಿನ ಎದ್ದು ರಾಮನ ಪೂಜೆ ಮಾಡಿ ಬರುತ್ತೇವೆ, ಇದನ್ನು ನಾವು ಬಿಜೆಪಿಯವರಿಂದ ಕಲಿಯಬೇಕಿಲ್ಲ. ಬದಲಾಗಿ ಅವರು ನಮ್ಮ ಬಳಿ ಕಲಿಯಬೇಕು ಎಂದು ಟಾಂಗ್ ನೀಡಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…