ರಾಜ್ಯ

ಬೆಳಗಾವಿಯ ಕಂಡಕ್ಟರ್‌ ಮೇಲಿರುವುದು ಸುಳ್ಳು ಪೋಕ್ಸೋ ಕೇಸ್‌: ರಾಮಲಿಂಗ ರೆಡ್ಡಿ

ಬೆಂಗಳೂರು: ಬೆಳಗಾವಿಯ ಕಂಡಕ್ಟರ್‌ ಮೇಲಿನ ಪ್ರಕರಣದ ನಂತರ ಪೋಕ್ಸೋ ಕೇಸ್‌ ದಾಖಲಿಸಿದ್ದರು, ಆದರೆ ಅದು ಸುಳ್ಳು ಪೋಕ್ಸೋ ಕೇಸ್‌ ಆಗಿದೆ ಎಂದು ಮುಂಚೆಯೇ ಹೇಳಿದ್ದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ ಬಳಿಕ ಸಂತ್ರಸ್ಥ ಯುವತಿಯ ತಾಯಿ ಪೋಕ್ಸೋ ಕೇಸ್‌ ಸನ್ನು ಹಿಂಪಡೆದರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ದ್ವೇಷಕ್ಕಾಗಿ ಒತ್ತಡ ಹೇರಿ ಕಂಡಕ್ಟರ್‌ ಮೇಲೆ ಪೋಕ್ಸೋ ಕೇಸ್ ಹಾಕಿಸಿದ್ದರು. ಈ ಬಗ್ಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಹ ಪೋಕ್ಸ್‌ ಕೇಸ್‌ ಸರಿ ಇಲ್ಲ ಎಂದಿದ್ದರು. ಆದರೆ ಇದೀಗ, ಕೇಸ್‌ ದಾಖಲಿಸಿದ್ದವರೇ ಹಿಂಪಡೆದಿದ್ದಾರೆ ಎಂದು ಹೇಳಿದರು.

ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ(ಫೆ.24) ಬೆಳಗಾವಿಗೆ ಭೇಟಿ ನೀಡಿ, ಕಂಡಕ್ಟರ್‌ನ ಆರೋಗ್ಯ ವಿಚಾರಿಸಿದೆ. ಬಳಿಕ ಈ ಬಗ್ಗೆ ಅಧಿಕಾರಗಳೊಂದಿಗೆ ಸಭೆ ನಡೆಸಿದ್ದೇವೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ 509 ಬಸ್ಸುಗಳು ಸಂಚರಿಸುತ್ತಿವೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 130 ಬಸ್‌ಗಳು ಸಂಚಾರ ಮಾಡುತ್ತಿವೆ. ಅವುಗಳಲ್ಲಿ ಒಂದು ಬಸ್‌ಗೆ ಮಾತ್ರ ನಮ್ಮಲ್ಲಿ ಮಸಿ ಬಳಿದಿದ್ದಾರೆ. ಇದಾದ ನಂತರ ಕನ್ನಡ ಸಂಘಟನೆಗಳು ಮಸಿ ಬಳಿದಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಬಸ್‌ಗಳ ಮೇಲೆ ಮಸಿ ಬಳಿಯುವುದು, ನಿರ್ವಾಹಕರ ಮೇಲೆ ಮಸಿ ಬಳಿಯುತ್ತಿದ್ದಾರೆ. ಹೀಗಾಗಿ ಇವೆಲ್ಲಾ ವಿಚಾರಗಳನ್ನು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಎಂದು ಮಾಹಿತಿ ನೀಡಿದರು.

ಇನ್ನು ನಮ್ಮ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಮಾಡುತ್ತಿಲ್ಲ. ಈ ಬಗ್ಗೆ ಅಲ್ಲಿನ ಸಿಎಸ್‌ ಮತ್ತು ಡಿಜಿಪಿ ಅವರೊಂದಿಗೆ ನಮ್ಮ ಸಿಎಸ್‌ ಚರ್ಚಿಸಿದ ನಂತರ ಅಲ್ಲಿಗೆ ಬಸ್‌ ಬಿಡುವ ಬಗ್ಗೆ ತೀರ್ಮಾನ ಮಾಡುತ್ತವೆ. ಮೊದಲು ನಮ್ಮ ರಾಜ್ಯದ ಡ್ರೈವರ್‌ ಮತ್ತು ಕಂಡಕ್ಟರ್‌ಗಳಿಗೆ ಅವರು ರಕ್ಷಣೆ ನೀಡಬೇಕು. ಅದಕ್ಕೆ ಪ್ರತಿಯಾಗಿ ಇಲ್ಲಿ ನಾವು ಅವರ ಡೈವರ್‌ ಮತ್ತು ಕಂಡಕ್ಟರ್‌ಗಳಿಗೆ ರಕ್ಷಣೆ ನೀಡುತ್ತೇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

1 min ago

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

1 hour ago

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

2 hours ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

3 hours ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

7 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

7 hours ago