ರಾಜ್ಯ

ಬೆಳಗಾವಿಯ ಕಂಡಕ್ಟರ್‌ ಮೇಲಿರುವುದು ಸುಳ್ಳು ಪೋಕ್ಸೋ ಕೇಸ್‌: ರಾಮಲಿಂಗ ರೆಡ್ಡಿ

ಬೆಂಗಳೂರು: ಬೆಳಗಾವಿಯ ಕಂಡಕ್ಟರ್‌ ಮೇಲಿನ ಪ್ರಕರಣದ ನಂತರ ಪೋಕ್ಸೋ ಕೇಸ್‌ ದಾಖಲಿಸಿದ್ದರು, ಆದರೆ ಅದು ಸುಳ್ಳು ಪೋಕ್ಸೋ ಕೇಸ್‌ ಆಗಿದೆ ಎಂದು ಮುಂಚೆಯೇ ಹೇಳಿದ್ದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ ಬಳಿಕ ಸಂತ್ರಸ್ಥ ಯುವತಿಯ ತಾಯಿ ಪೋಕ್ಸೋ ಕೇಸ್‌ ಸನ್ನು ಹಿಂಪಡೆದರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ದ್ವೇಷಕ್ಕಾಗಿ ಒತ್ತಡ ಹೇರಿ ಕಂಡಕ್ಟರ್‌ ಮೇಲೆ ಪೋಕ್ಸೋ ಕೇಸ್ ಹಾಕಿಸಿದ್ದರು. ಈ ಬಗ್ಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಹ ಪೋಕ್ಸ್‌ ಕೇಸ್‌ ಸರಿ ಇಲ್ಲ ಎಂದಿದ್ದರು. ಆದರೆ ಇದೀಗ, ಕೇಸ್‌ ದಾಖಲಿಸಿದ್ದವರೇ ಹಿಂಪಡೆದಿದ್ದಾರೆ ಎಂದು ಹೇಳಿದರು.

ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ(ಫೆ.24) ಬೆಳಗಾವಿಗೆ ಭೇಟಿ ನೀಡಿ, ಕಂಡಕ್ಟರ್‌ನ ಆರೋಗ್ಯ ವಿಚಾರಿಸಿದೆ. ಬಳಿಕ ಈ ಬಗ್ಗೆ ಅಧಿಕಾರಗಳೊಂದಿಗೆ ಸಭೆ ನಡೆಸಿದ್ದೇವೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ 509 ಬಸ್ಸುಗಳು ಸಂಚರಿಸುತ್ತಿವೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 130 ಬಸ್‌ಗಳು ಸಂಚಾರ ಮಾಡುತ್ತಿವೆ. ಅವುಗಳಲ್ಲಿ ಒಂದು ಬಸ್‌ಗೆ ಮಾತ್ರ ನಮ್ಮಲ್ಲಿ ಮಸಿ ಬಳಿದಿದ್ದಾರೆ. ಇದಾದ ನಂತರ ಕನ್ನಡ ಸಂಘಟನೆಗಳು ಮಸಿ ಬಳಿದಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಬಸ್‌ಗಳ ಮೇಲೆ ಮಸಿ ಬಳಿಯುವುದು, ನಿರ್ವಾಹಕರ ಮೇಲೆ ಮಸಿ ಬಳಿಯುತ್ತಿದ್ದಾರೆ. ಹೀಗಾಗಿ ಇವೆಲ್ಲಾ ವಿಚಾರಗಳನ್ನು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಎಂದು ಮಾಹಿತಿ ನೀಡಿದರು.

ಇನ್ನು ನಮ್ಮ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಮಾಡುತ್ತಿಲ್ಲ. ಈ ಬಗ್ಗೆ ಅಲ್ಲಿನ ಸಿಎಸ್‌ ಮತ್ತು ಡಿಜಿಪಿ ಅವರೊಂದಿಗೆ ನಮ್ಮ ಸಿಎಸ್‌ ಚರ್ಚಿಸಿದ ನಂತರ ಅಲ್ಲಿಗೆ ಬಸ್‌ ಬಿಡುವ ಬಗ್ಗೆ ತೀರ್ಮಾನ ಮಾಡುತ್ತವೆ. ಮೊದಲು ನಮ್ಮ ರಾಜ್ಯದ ಡ್ರೈವರ್‌ ಮತ್ತು ಕಂಡಕ್ಟರ್‌ಗಳಿಗೆ ಅವರು ರಕ್ಷಣೆ ನೀಡಬೇಕು. ಅದಕ್ಕೆ ಪ್ರತಿಯಾಗಿ ಇಲ್ಲಿ ನಾವು ಅವರ ಡೈವರ್‌ ಮತ್ತು ಕಂಡಕ್ಟರ್‌ಗಳಿಗೆ ರಕ್ಷಣೆ ನೀಡುತ್ತೇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago