ರಾಜ್ಯ

ಬೆಳಗಾವಿಯ ಕಂಡಕ್ಟರ್‌ ಮೇಲಿರುವುದು ಸುಳ್ಳು ಪೋಕ್ಸೋ ಕೇಸ್‌: ರಾಮಲಿಂಗ ರೆಡ್ಡಿ

ಬೆಂಗಳೂರು: ಬೆಳಗಾವಿಯ ಕಂಡಕ್ಟರ್‌ ಮೇಲಿನ ಪ್ರಕರಣದ ನಂತರ ಪೋಕ್ಸೋ ಕೇಸ್‌ ದಾಖಲಿಸಿದ್ದರು, ಆದರೆ ಅದು ಸುಳ್ಳು ಪೋಕ್ಸೋ ಕೇಸ್‌ ಆಗಿದೆ ಎಂದು ಮುಂಚೆಯೇ ಹೇಳಿದ್ದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ ಬಳಿಕ ಸಂತ್ರಸ್ಥ ಯುವತಿಯ ತಾಯಿ ಪೋಕ್ಸೋ ಕೇಸ್‌ ಸನ್ನು ಹಿಂಪಡೆದರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ದ್ವೇಷಕ್ಕಾಗಿ ಒತ್ತಡ ಹೇರಿ ಕಂಡಕ್ಟರ್‌ ಮೇಲೆ ಪೋಕ್ಸೋ ಕೇಸ್ ಹಾಕಿಸಿದ್ದರು. ಈ ಬಗ್ಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಹ ಪೋಕ್ಸ್‌ ಕೇಸ್‌ ಸರಿ ಇಲ್ಲ ಎಂದಿದ್ದರು. ಆದರೆ ಇದೀಗ, ಕೇಸ್‌ ದಾಖಲಿಸಿದ್ದವರೇ ಹಿಂಪಡೆದಿದ್ದಾರೆ ಎಂದು ಹೇಳಿದರು.

ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ(ಫೆ.24) ಬೆಳಗಾವಿಗೆ ಭೇಟಿ ನೀಡಿ, ಕಂಡಕ್ಟರ್‌ನ ಆರೋಗ್ಯ ವಿಚಾರಿಸಿದೆ. ಬಳಿಕ ಈ ಬಗ್ಗೆ ಅಧಿಕಾರಗಳೊಂದಿಗೆ ಸಭೆ ನಡೆಸಿದ್ದೇವೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ 509 ಬಸ್ಸುಗಳು ಸಂಚರಿಸುತ್ತಿವೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 130 ಬಸ್‌ಗಳು ಸಂಚಾರ ಮಾಡುತ್ತಿವೆ. ಅವುಗಳಲ್ಲಿ ಒಂದು ಬಸ್‌ಗೆ ಮಾತ್ರ ನಮ್ಮಲ್ಲಿ ಮಸಿ ಬಳಿದಿದ್ದಾರೆ. ಇದಾದ ನಂತರ ಕನ್ನಡ ಸಂಘಟನೆಗಳು ಮಸಿ ಬಳಿದಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಬಸ್‌ಗಳ ಮೇಲೆ ಮಸಿ ಬಳಿಯುವುದು, ನಿರ್ವಾಹಕರ ಮೇಲೆ ಮಸಿ ಬಳಿಯುತ್ತಿದ್ದಾರೆ. ಹೀಗಾಗಿ ಇವೆಲ್ಲಾ ವಿಚಾರಗಳನ್ನು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಎಂದು ಮಾಹಿತಿ ನೀಡಿದರು.

ಇನ್ನು ನಮ್ಮ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಮಾಡುತ್ತಿಲ್ಲ. ಈ ಬಗ್ಗೆ ಅಲ್ಲಿನ ಸಿಎಸ್‌ ಮತ್ತು ಡಿಜಿಪಿ ಅವರೊಂದಿಗೆ ನಮ್ಮ ಸಿಎಸ್‌ ಚರ್ಚಿಸಿದ ನಂತರ ಅಲ್ಲಿಗೆ ಬಸ್‌ ಬಿಡುವ ಬಗ್ಗೆ ತೀರ್ಮಾನ ಮಾಡುತ್ತವೆ. ಮೊದಲು ನಮ್ಮ ರಾಜ್ಯದ ಡ್ರೈವರ್‌ ಮತ್ತು ಕಂಡಕ್ಟರ್‌ಗಳಿಗೆ ಅವರು ರಕ್ಷಣೆ ನೀಡಬೇಕು. ಅದಕ್ಕೆ ಪ್ರತಿಯಾಗಿ ಇಲ್ಲಿ ನಾವು ಅವರ ಡೈವರ್‌ ಮತ್ತು ಕಂಡಕ್ಟರ್‌ಗಳಿಗೆ ರಕ್ಷಣೆ ನೀಡುತ್ತೇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

11 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

11 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

12 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

13 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago