ರಾಜ್ಯ

ಪಿಯೂಷ್‌ ಗೋಯಲ್‌ ಅವರ ಹೇಳಿಕೆಯೇ ಸಣ್ಣತನ: ರಾಮಲಿಂಗ ರೆಡ್ಡಿ

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯೂಷ್‌ ಅವರಿಗೆ ಸಾಮಾನ್ಯ ಜ್ಞಾನವಿಲ್ಲದೇ ಇರುವುದರಿಂದ ಹಾಗೇ ಹೇಳಿಕೆಗಳನ್ನು ನೀಡಿದ್ದಾರೆ. ನಮ್ಮ ರಾಜ್ಯದಿಂದ ಸುಮಾರು 4.5 ಲಕ್ಷ ಕೋಟಿ ಜಿಎಸ್‌ಟಿ ಮೂಲಕ ಕೇಂದ್ರಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಹಕ್ಕನ್ನು ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನೂ ಕೇಂದ್ರದಿಂದ ನಮಗೆ 1 ರೂಪಾಯಿಗೆ 12 ಪೈಸೆ ಮಾತ್ರ ಸಿಗುತ್ತಿದೆ. ನಮ್ಮ ರಾಜ್ಯದಿಂದ ಅಷ್ಟು ತೆರಿಗೆ ಕಟ್ಟಿದರು ಅವರು ನಮ್ಮ ರಾಜ್ಯದ ಅಭಿವೃದ್ಧಿಗೆ ಸರಿಯಾದ ಹಣವನ್ನು ಬಿಡುಗಡೆ ಮಾಡುವುದಿಲ್ಲ. ಹಾಗಾಗಿ ರಾಜ್ಯ ತೆರಿಗೆಯ ಬಗ್ಗೆ ಕೇಳೋದು ಸರಿಯಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯಗಳು ತೆರಿಗೆ ಕಟ್ಟುವಾಗ ಕೇಂದ್ರದಿಂದ ಅಧಿಕ ಪಾಲು ನೀಡಿ ಎಂದು ಕೇಳೋದು ತಪ್ಪಲ್ಲ. ಪಿಯೂಷ್‌ ಅವರು ಕರ್ನಾಟಕದವರು ಆಗಿದ್ದರೆ ಏನು ಮಾಡುತ್ತಿದ್ದರು? ಆಗ ಅವರು ಇದೇ ರೀತಿ ಹೇಳುತ್ತಿದ್ದರಾ? ಹಾಗದರೆ ನಾವು ಕೇಂದ್ರಕ್ಕೆ ಅಧಿಕ ತೆರಿಗೆ ಪಾವತಿಸುವುದು ತಪ್ಪಾ ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

1 hour ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago