ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯೂಷ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲದೇ ಇರುವುದರಿಂದ ಹಾಗೇ ಹೇಳಿಕೆಗಳನ್ನು ನೀಡಿದ್ದಾರೆ. ನಮ್ಮ ರಾಜ್ಯದಿಂದ ಸುಮಾರು 4.5 ಲಕ್ಷ ಕೋಟಿ ಜಿಎಸ್ಟಿ ಮೂಲಕ ಕೇಂದ್ರಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಹಕ್ಕನ್ನು ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಕೇಂದ್ರದಿಂದ ನಮಗೆ 1 ರೂಪಾಯಿಗೆ 12 ಪೈಸೆ ಮಾತ್ರ ಸಿಗುತ್ತಿದೆ. ನಮ್ಮ ರಾಜ್ಯದಿಂದ ಅಷ್ಟು ತೆರಿಗೆ ಕಟ್ಟಿದರು ಅವರು ನಮ್ಮ ರಾಜ್ಯದ ಅಭಿವೃದ್ಧಿಗೆ ಸರಿಯಾದ ಹಣವನ್ನು ಬಿಡುಗಡೆ ಮಾಡುವುದಿಲ್ಲ. ಹಾಗಾಗಿ ರಾಜ್ಯ ತೆರಿಗೆಯ ಬಗ್ಗೆ ಕೇಳೋದು ಸರಿಯಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯಗಳು ತೆರಿಗೆ ಕಟ್ಟುವಾಗ ಕೇಂದ್ರದಿಂದ ಅಧಿಕ ಪಾಲು ನೀಡಿ ಎಂದು ಕೇಳೋದು ತಪ್ಪಲ್ಲ. ಪಿಯೂಷ್ ಅವರು ಕರ್ನಾಟಕದವರು ಆಗಿದ್ದರೆ ಏನು ಮಾಡುತ್ತಿದ್ದರು? ಆಗ ಅವರು ಇದೇ ರೀತಿ ಹೇಳುತ್ತಿದ್ದರಾ? ಹಾಗದರೆ ನಾವು ಕೇಂದ್ರಕ್ಕೆ ಅಧಿಕ ತೆರಿಗೆ ಪಾವತಿಸುವುದು ತಪ್ಪಾ ಎಂದು ಪ್ರಶ್ನಿಸಿದರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…