ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯೂಷ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲದೇ ಇರುವುದರಿಂದ ಹಾಗೇ ಹೇಳಿಕೆಗಳನ್ನು ನೀಡಿದ್ದಾರೆ. ನಮ್ಮ ರಾಜ್ಯದಿಂದ ಸುಮಾರು 4.5 ಲಕ್ಷ ಕೋಟಿ ಜಿಎಸ್ಟಿ ಮೂಲಕ ಕೇಂದ್ರಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಹಕ್ಕನ್ನು ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಕೇಂದ್ರದಿಂದ ನಮಗೆ 1 ರೂಪಾಯಿಗೆ 12 ಪೈಸೆ ಮಾತ್ರ ಸಿಗುತ್ತಿದೆ. ನಮ್ಮ ರಾಜ್ಯದಿಂದ ಅಷ್ಟು ತೆರಿಗೆ ಕಟ್ಟಿದರು ಅವರು ನಮ್ಮ ರಾಜ್ಯದ ಅಭಿವೃದ್ಧಿಗೆ ಸರಿಯಾದ ಹಣವನ್ನು ಬಿಡುಗಡೆ ಮಾಡುವುದಿಲ್ಲ. ಹಾಗಾಗಿ ರಾಜ್ಯ ತೆರಿಗೆಯ ಬಗ್ಗೆ ಕೇಳೋದು ಸರಿಯಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯಗಳು ತೆರಿಗೆ ಕಟ್ಟುವಾಗ ಕೇಂದ್ರದಿಂದ ಅಧಿಕ ಪಾಲು ನೀಡಿ ಎಂದು ಕೇಳೋದು ತಪ್ಪಲ್ಲ. ಪಿಯೂಷ್ ಅವರು ಕರ್ನಾಟಕದವರು ಆಗಿದ್ದರೆ ಏನು ಮಾಡುತ್ತಿದ್ದರು? ಆಗ ಅವರು ಇದೇ ರೀತಿ ಹೇಳುತ್ತಿದ್ದರಾ? ಹಾಗದರೆ ನಾವು ಕೇಂದ್ರಕ್ಕೆ ಅಧಿಕ ತೆರಿಗೆ ಪಾವತಿಸುವುದು ತಪ್ಪಾ ಎಂದು ಪ್ರಶ್ನಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…