ರಾಜ್ಯ

ಪಿಯೂಷ್‌ ಗೋಯಲ್‌ ಅವರ ಹೇಳಿಕೆಯೇ ಸಣ್ಣತನ: ರಾಮಲಿಂಗ ರೆಡ್ಡಿ

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯೂಷ್‌ ಅವರಿಗೆ ಸಾಮಾನ್ಯ ಜ್ಞಾನವಿಲ್ಲದೇ ಇರುವುದರಿಂದ ಹಾಗೇ ಹೇಳಿಕೆಗಳನ್ನು ನೀಡಿದ್ದಾರೆ. ನಮ್ಮ ರಾಜ್ಯದಿಂದ ಸುಮಾರು 4.5 ಲಕ್ಷ ಕೋಟಿ ಜಿಎಸ್‌ಟಿ ಮೂಲಕ ಕೇಂದ್ರಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಹಕ್ಕನ್ನು ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನೂ ಕೇಂದ್ರದಿಂದ ನಮಗೆ 1 ರೂಪಾಯಿಗೆ 12 ಪೈಸೆ ಮಾತ್ರ ಸಿಗುತ್ತಿದೆ. ನಮ್ಮ ರಾಜ್ಯದಿಂದ ಅಷ್ಟು ತೆರಿಗೆ ಕಟ್ಟಿದರು ಅವರು ನಮ್ಮ ರಾಜ್ಯದ ಅಭಿವೃದ್ಧಿಗೆ ಸರಿಯಾದ ಹಣವನ್ನು ಬಿಡುಗಡೆ ಮಾಡುವುದಿಲ್ಲ. ಹಾಗಾಗಿ ರಾಜ್ಯ ತೆರಿಗೆಯ ಬಗ್ಗೆ ಕೇಳೋದು ಸರಿಯಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯಗಳು ತೆರಿಗೆ ಕಟ್ಟುವಾಗ ಕೇಂದ್ರದಿಂದ ಅಧಿಕ ಪಾಲು ನೀಡಿ ಎಂದು ಕೇಳೋದು ತಪ್ಪಲ್ಲ. ಪಿಯೂಷ್‌ ಅವರು ಕರ್ನಾಟಕದವರು ಆಗಿದ್ದರೆ ಏನು ಮಾಡುತ್ತಿದ್ದರು? ಆಗ ಅವರು ಇದೇ ರೀತಿ ಹೇಳುತ್ತಿದ್ದರಾ? ಹಾಗದರೆ ನಾವು ಕೇಂದ್ರಕ್ಕೆ ಅಧಿಕ ತೆರಿಗೆ ಪಾವತಿಸುವುದು ತಪ್ಪಾ ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

46 mins ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

6 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

7 hours ago