ರಾಜ್ಯ

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ ಅವರು, ಹೈಕಮಾಂಡ್ ನಾಯಕರ ಮಧ್ಯ ಪ್ರವೇಶದ ಹಿನ್ನೆಲೆ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಇದರಿಂದ ಸರ್ಕಾರಕ್ಕೆ ಎದುರಾಗಿದ್ದ ಕಂಠಕ ತಾತ್ಕಾಲಿಕವಾಗಿ ನಿವಾರಣೆ ಆದಂತಾಗಿದೆ.

​ರಾಜೀನಾಮೆಯ ಸುದ್ದಿ ಹೊರಬಿದ್ದ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಹೈಕಮಾಂಡ್ ತಕ್ಷಣವೇ ಮಧ್ಯಪ್ರವೇಶಿಸಿ, ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿತು. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ರಾಮಲಿಂಗ ರೆಡ್ಡಿ ಅವರಂತಹ ಅನುಭವಿ ನಾಯಕರ ಅಗತ್ಯವನ್ನು ಮನವರಿಕೆ ಮಾಡಿಕೊಡುವಲ್ಲಿ ವರಿಷ್ಠರು ಯಶಸ್ವಿಯಾಗಿದ್ದಾರೆ.

ಶನಿವಾರ ಕಾಂಗ್ರೆಸ್ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೆವಾಲ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಮಲಿಂಗ ರೆಡ್ಡಿ ಜೊತೆ ಮಾತುಕತೆ ನಡೆಸಿ ರಾಜೀನಾಮೆ ಪತ್ರವನ್ನು ಹಿಂಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ನಿಮ್ಮ ರಾಜೀನಾಮೆಯಿಂದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತವೆ ಇದರಿಂದ ಕೆಲವರು ನಿಮ್ಮ ದಾರಿಯನ್ನೇ ಅನುಸರಿಸಬಹುದು ಹೀಗಾಗಿ ಕೂಡಲೇ ರಾಜೀನಾಮೆ ಪತ್ರವನ್ನು ಹಿಂಪಡೆದುಕೊಳ್ಳಿ ಎಂದು ಸುರ್ಜೆವಾಲ ಮನವರಿಕೆ ಮಾಡಿಕೊಟ್ಟರು.

ಇದರ ಬೆನ್ನಲ್ಲೇ, ಕೋರಮಂಗಲದಲ್ಲಿರುವ ತಮ್ಮ ಕಚೇರಿ ಆಗಮಿಸಿದ ರೆಡ್ಡಿ ಅವರು ಆಪ್ತರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು.

ಬಳಿಕ ಮತ್ತೆ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಹರಿಪ್ರಸಾದ್ ಹಾಗೂ ಸುರ್ಜೆವಾಲ ಅವರುಗಳು ರಾಮಲಿಂಗ ರೆಡ್ಡಿ ಜೊತೆ ಎರಡನೇ ಬಾರಿ ಮತಗಟ್ಟೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು.

ಇದರ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸುರ್ಜೇವಾಲ ಮತ್ತು ಹರಿಪ್ರಸಾದ್ ರಾಮಲಿಂಗ ರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯಲ್ಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

ಯಾವುದೇ ಕಾರಣಕ್ಕೂ ನನ್ನ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಅಂದರೆ ಇದರ ಅರ್ಥ ರಾಜೀನಾಮೆ ಪತ್ರ ತಿರಸ್ಕಾರವಾಗಿದೆ ಎಂಬರ್ಥ. ಮುಂದಿನ ದಿನಗಳಲ್ಲಿ ಸೂಕ್ತವಾದ ಸ್ಥಾನಮಾನ ನೀಡುವ ಭರವಸೆ ಸಿಕ್ಕಿದೆ. ನೋಡೋಣ ಸ್ವಲ್ಪ ದಿನ ಏನಾಗುತ್ತದೆಯೋ ಎಂದು ಸೂಚ್ಯವಾಗಿ ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago