ರಾಜ್ಯ

ರಾಮನಗರ ಹೆಸರು ಬದಲಾವಣೆಗೆ ಡಾ.ಮಂಜುನಾಥ್‌ ವಿರೋಧ: ಸಿಎಂಗೆ ಪತ್ರ ಬರೆದ ಸಂಸದ

ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು ಏನು ಮಾಡೋದು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್‌ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಪಕ್ಕದ ಜಿಲ್ಲೆಯಾದ ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಮಾಡೋದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶತ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್‌ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಯಾವುದೇ ಅನುಕೂಲ ಇಲ್ಲ. ಬ್ರ್ಯಾಂಡ್‌ ಬೆಂಗಳೂರಿನಲ್ಲಿಯೇ ಹಲವು ಸಮಸ್ಯೆಗಳಿವೆ. ಇನ್ನು ರಾಮನಗರವನ್ನು ಅಭಿವೃದ್ದಿ ಮಾಡಲು ಹೇಗೆ ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ರಾಮನಗರದ ಭೂಮಿಯಲ್ಲಿ ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ಸಿಗುವ ಕಡೆ ಗಮನ ಕೊಡಬೇಕೇ ವಿನಃ ಈ ಭೂಮಿಗೆ ಬೆಲೆ ಕಟ್ಟುವ ನಿರ್ಧಾರಕ್ಕೆ ಕೈ ಹಾಕಬಾರದು ಎಂದು ಆಗ್ರಹಿಸಿದ್ದಾರೆ.

ಇನ್ನೂ ರಾಮನಗರಕ್ಕೆ ಮರು ನಾಮಕರಣ ಮಾಡದಂತೆ ಸಿಎಂ ಸಿದ್ದರಾಮಯ್ಯಗೆ ಡಾ.ಮಂಜುನಾಥ್‌ ಪತ್ರವನ್ನೂ ಬರೆದಿದ್ದಾರೆ.

ಶ್ರೀರಾಮಚಂದ್ರರು ತಮ್ಮ ವನವಾಸದ ಅವಧಿಯನ್ನು ಕಳೆದ ರೇಷ್ಮೆ ನಾಡು ರಾಮನಗರವನ್ನೇ ಬ್ರಾಂಡ್‌ ಮಾಡಿಕೊಂಡು ಅಭಿವೃದ್ಧಿ ಮಾಡುವತ್ತ ರಾಜ್ಯ ಸರ್ಕಾರ ಗಮನ ನೀಡಲಿ ಎಂದು ಸಂಸದ ಮಂಜುನಾಥ್‌ ಸಲಹೆ ನೀಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

21 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

52 mins ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

5 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

9 hours ago