ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು ಏನು ಮಾಡೋದು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಪಕ್ಕದ ಜಿಲ್ಲೆಯಾದ ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಮಾಡೋದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಶತ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಯಾವುದೇ ಅನುಕೂಲ ಇಲ್ಲ. ಬ್ರ್ಯಾಂಡ್ ಬೆಂಗಳೂರಿನಲ್ಲಿಯೇ ಹಲವು ಸಮಸ್ಯೆಗಳಿವೆ. ಇನ್ನು ರಾಮನಗರವನ್ನು ಅಭಿವೃದ್ದಿ ಮಾಡಲು ಹೇಗೆ ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ರಾಮನಗರದ ಭೂಮಿಯಲ್ಲಿ ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ಸಿಗುವ ಕಡೆ ಗಮನ ಕೊಡಬೇಕೇ ವಿನಃ ಈ ಭೂಮಿಗೆ ಬೆಲೆ ಕಟ್ಟುವ ನಿರ್ಧಾರಕ್ಕೆ ಕೈ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಇನ್ನೂ ರಾಮನಗರಕ್ಕೆ ಮರು ನಾಮಕರಣ ಮಾಡದಂತೆ ಸಿಎಂ ಸಿದ್ದರಾಮಯ್ಯಗೆ ಡಾ.ಮಂಜುನಾಥ್ ಪತ್ರವನ್ನೂ ಬರೆದಿದ್ದಾರೆ.
ಶ್ರೀರಾಮಚಂದ್ರರು ತಮ್ಮ ವನವಾಸದ ಅವಧಿಯನ್ನು ಕಳೆದ ರೇಷ್ಮೆ ನಾಡು ರಾಮನಗರವನ್ನೇ ಬ್ರಾಂಡ್ ಮಾಡಿಕೊಂಡು ಅಭಿವೃದ್ಧಿ ಮಾಡುವತ್ತ ರಾಜ್ಯ ಸರ್ಕಾರ ಗಮನ ನೀಡಲಿ ಎಂದು ಸಂಸದ ಮಂಜುನಾಥ್ ಸಲಹೆ ನೀಡಿದ್ದಾರೆ.
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…