ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ.
ರಾಮನಗರದ ಬಿಡದಿಯಲ್ಲಿ ಈ ಘಟನೆ ನಡೆದಿದ್ದು, ಜಿಮ್ ತರಬೇತುದಾರ ವೇಣುಗೋಪಾಲ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ವೇಣುಗೋಪಾಲ್ ಪ್ರೇಯಸಿ ಸುಧಾ ಎಂಬುವವಳೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾಳೆ.
ಸುಧಾ ಹಾಗೂ ವೇಣುಗೋಪಾಲ್ ಕೆಲ ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಆದರೆ ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪ ಉಟಾಗಿತ್ತು. ಏಕಾಏಕಿ ಪ್ರಿಯಕರನ ಮೇಲೆ ಸುಧಾಆ ಚಾಕುವಿನಿಂದ ಇರಿದಿದ್ದಾಳೆ. ಗಂಭೀರ ಗಾಯಗೊಂಡಿರುವ ವೇಣುಗೋಪಾಲ್ನನ್ನು ಆಸ್ಪತ್ತೆಗೆ ದಾಖಲು ಮಾಡಲಾಗಿದೆ.





