ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ.
ಸಾಫ್ಟ್ವೇರ್ ಉದ್ಯೋಗಿಯಾಗಿರುವ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅರ್ಧ ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಸಂಜೆ ಲಿಖಿತ್ ಮನೆಗೆ ಬಂದಾಗ ಬೀಗ ಮುರಿದಿರುವುದು ಕಂಡು ಬಂದಿದೆ. ನಂತರ ಬೆಡ್ರೂಮ್ನ ಕಬೋರ್ಡ್ ಗಮನಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಕಳ್ಳರು ಚಿನ್ನಾಭರಣ ದೋಚಿದ್ದಲ್ಲದೇ ಸಿಸಿಟಿವಿ ಡಿವಿಆರ್ ಕೂಡ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ರಾಮನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿ ಪರಿಶೀಲನೆ ಮಾಡಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…
ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…