ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ.
ಸಾಫ್ಟ್ವೇರ್ ಉದ್ಯೋಗಿಯಾಗಿರುವ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅರ್ಧ ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಸಂಜೆ ಲಿಖಿತ್ ಮನೆಗೆ ಬಂದಾಗ ಬೀಗ ಮುರಿದಿರುವುದು ಕಂಡು ಬಂದಿದೆ. ನಂತರ ಬೆಡ್ರೂಮ್ನ ಕಬೋರ್ಡ್ ಗಮನಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಕಳ್ಳರು ಚಿನ್ನಾಭರಣ ದೋಚಿದ್ದಲ್ಲದೇ ಸಿಸಿಟಿವಿ ಡಿವಿಆರ್ ಕೂಡ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ರಾಮನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿ ಪರಿಶೀಲನೆ ಮಾಡಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…