ರಮೇಶ್ ಜಾರಕಿಹೊಳಿ, ನಮ್ಮ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಬಂದರೆ ಸ್ವಾಗತಿಸುತ್ತೇವೆ : ಸಿ ಎಂ ಇಬ್ರಾಹಿಂ’
ಬೆಳಗಾವಿ: ನಮ್ಮ ಪಕ್ಷದ ಸಿದ್ಧಾಂತಗಳನನು ಒಪ್ಪಿಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ.
ನಮ್ಮ ಪಕ್ಷದ ಸಿದ್ಧಾಂತಗಳನನು ಒಪ್ಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಬರುವುದಾದರೆ ಸ್ವಾಗತ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ ಜಾರಕಿಹೊಳಿ ಅಥವಾ ಯಾರು ಬರುತ್ತಾರೆಯೋ ಅಂಥವರಿಗೆ ಜಿಲ್ಲಾ ಮಟ್ಟದಲ್ಲಿನ ನಾಯಕರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ. ಪಕ್ಷ ಸಂಘಟನೆಗೆ ಜನರ ಜೊತೆಗೆ ನೇರವಾಗಿ ಸಂಪರ್ಕ ಮಾಡುತ್ತಿದ್ದೇವೆ. ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗುರುತಿಸಿ ಕೆಲಸ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದರು
ಜನರ ಜೊತೆಗೆ ನೇರವಾಗಿ ಸಂಪರ್ಕ ಮಾಡುತ್ತಿದ್ದೇವೆ. ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗುರುತಿಸಿ ಕೆಲಸ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದರು. ಬೆಳಗಾವಿ ಸುವರ್ಣ ವಿಧಾನಸೌಧ ಸದ್ಬಳಕೆಯಾಗಬೇಕು. ಈ’ ಭಾಗದ ಜನರು ಸಮಸ್ಯೆ ತೆಗೆದುಕೊಂಡು ಬೆಂಗಳೂರು ಬರುವುದು ಬೇಡ. ಇಲ್ಲಿಯೇ ಇತ್ಯರ್ಥವಾಗಬೇಕು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರಕ್ಕೆ ಬಂದರೆ ಇದೊಂದು ಕಾಯಕಲ್ಪ ನೀಡಲಾಗುವುದು ಎಂದರು.