ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು ಹೈಕಮಾಂಡ್ ವಿರುದ್ಧ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅಸಮಾಧನ ವ್ಯಕ್ತಪಡಿಸಿದರು.
ಕಳೆದ ವಾರವೂ ಕೂಡ ಹೈಕಮಾಂಡ್ ವಿರುದ್ಧ ಹಾಗೂ ರಾಜ್ಯ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಇಂದು ಕೂಡ ನಗರದಲ್ಲಿ ಸಂಸದರ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ನನಗೆ ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ. ಅವಶ್ಯಕತೆ ಇರುವುದು ಜನರದ್ದು. ನಾಣು ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ ಥೂ ಎಂದು ಬೈದಿದ್ದರು. ನಾವು ಮೊದಲೆ ಹೇಳಿದ್ದೇವು. ಈ ಪಕ್ಷ ದಲಿತರ ವಿರೋಧಿ, ಬಿಜೆಪಿ ಪಕ್ಷ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಇದೆ. ಇದು ಎಂತಹ ನ್ಯಾಯ ನೀವೇ ಹೇಳಿ. ಎಲ್ಲಾ ಮೇಲ್ಜಾತಿಯವರು ಸಚಿವರಾಗಿದ್ದಾರೆ ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ ಎಂದು ಪೃಶ್ನೆ ಮಾಡಿದರು. ಅಲ್ಲದೆ ಈ ವಿಚಾರದಿಂದ ನನಗೆ ಬಹಳ ನೋವಾಗಿದೆ ಎಂದು ಬೇಸರ ಹೊರಹಾಕಿದರು.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…