ರಾಜ್ಯ

ಹೈಕಮಾಂಡ್ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಮೇಶ್ ಜಿಗಜಿಣಗಿ

ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು ಹೈಕಮಾಂಡ್‌ ವಿರುದ್ಧ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅಸಮಾಧನ ವ್ಯಕ್ತಪಡಿಸಿದರು.

ಕಳೆದ ವಾರವೂ ಕೂಡ ಹೈಕಮಾಂಡ್‌ ವಿರುದ್ಧ ಹಾಗೂ ರಾಜ್ಯ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಇಂದು ಕೂಡ ನಗರದಲ್ಲಿ ಸಂಸದರ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ನನಗೆ ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ. ಅವಶ್ಯಕತೆ ಇರುವುದು ಜನರದ್ದು. ನಾಣು ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ ಥೂ ಎಂದು ಬೈದಿದ್ದರು.  ನಾವು ಮೊದಲೆ ಹೇಳಿದ್ದೇವು. ಈ ಪಕ್ಷ ದಲಿತರ ವಿರೋಧಿ, ಬಿಜೆಪಿ ಪಕ್ಷ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಇದೆ. ಇದು ಎಂತಹ ನ್ಯಾಯ ನೀವೇ ಹೇಳಿ. ಎಲ್ಲಾ ಮೇಲ್ಜಾತಿಯವರು  ಸಚಿವರಾಗಿದ್ದಾರೆ ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ ಎಂದು ಪೃಶ್ನೆ ಮಾಡಿದರು. ಅಲ್ಲದೆ ಈ ವಿಚಾರದಿಂದ ನನಗೆ ಬಹಳ ನೋವಾಗಿದೆ ಎಂದು ಬೇಸರ ಹೊರಹಾಕಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

5 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

7 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

9 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

10 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

13 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

13 hours ago