ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು ಹೈಕಮಾಂಡ್ ವಿರುದ್ಧ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅಸಮಾಧನ ವ್ಯಕ್ತಪಡಿಸಿದರು.
ಕಳೆದ ವಾರವೂ ಕೂಡ ಹೈಕಮಾಂಡ್ ವಿರುದ್ಧ ಹಾಗೂ ರಾಜ್ಯ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಇಂದು ಕೂಡ ನಗರದಲ್ಲಿ ಸಂಸದರ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ನನಗೆ ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ. ಅವಶ್ಯಕತೆ ಇರುವುದು ಜನರದ್ದು. ನಾಣು ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ ಥೂ ಎಂದು ಬೈದಿದ್ದರು. ನಾವು ಮೊದಲೆ ಹೇಳಿದ್ದೇವು. ಈ ಪಕ್ಷ ದಲಿತರ ವಿರೋಧಿ, ಬಿಜೆಪಿ ಪಕ್ಷ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಇದೆ. ಇದು ಎಂತಹ ನ್ಯಾಯ ನೀವೇ ಹೇಳಿ. ಎಲ್ಲಾ ಮೇಲ್ಜಾತಿಯವರು ಸಚಿವರಾಗಿದ್ದಾರೆ ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ ಎಂದು ಪೃಶ್ನೆ ಮಾಡಿದರು. ಅಲ್ಲದೆ ಈ ವಿಚಾರದಿಂದ ನನಗೆ ಬಹಳ ನೋವಾಗಿದೆ ಎಂದು ಬೇಸರ ಹೊರಹಾಕಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…