ರಾಜ್ಯ

ರಾಮೇಶ್ವರಂ ಕೆಫೆ ಪ್ರಕರಣ: ಬಾಂಬರ್‌ ಯಾರೆಂಬುದು ಗೊತ್ತಾಗಿದೆ: ಜಿ ಪರಮೇಶ್ವರ್‌

ಬೆಂಗಳೂರು: ಬೆಂಗಳೂರಿನ ಹೆಸರಾಂತ ರಾಮೇಶ್ವರಂ ಕೆಫೆಯ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಂದು ಹಂತಕ್ಕೆ ಗುರುತಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ. ಈ ಕೆಲಸವನ್ನು ಸಿಸಿಬಿ, ಎನ್‌ಐಎ ಅವರು ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಅನಂತಕುಮಾರ್ ಹೆಗಡೆ ಅವರ ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಧಾನಿಯವರು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದನ್ನು ಶ್ಲಾಘಿಸಿದ್ದಾರೆ. ಆದರೆ, ಅವರ ಪಕ್ಷದ ಸಂಸದ ಸಂವಿಧಾನ ಬದಲು ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ಹಿಂದೆಯೂ ಹಲವು ಬಾರಿ ಸಂಸದ ಅನಂತಕುಮಾರ್ ಹೆಗಡೆ ಹೀಗೆ ಹೇಳಿದ್ದಾರೆ. ಕೇವಲ ಸಂಸದ​ ಹಗಡೆ ಹೇಳಿಕೆಯಿಂದ ದೂರ ಇದ್ದೇವೆ ಎಂದರೆ ಸಾಲದು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನವನ್ನೇ ‌ಬದಲಿಸುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಇನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಇಂದು ಉಳಿದ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ದೊರೆಯಲಿದೆ. ಅಭ್ಯರ್ಥಿಗಳ ಬಗ್ಗೆ ಸಂಜೆ ಅಂತಿಮವಾಗಿ ತಿಳಿಯಲಿದೆ ಎಂದು ತಿಳಿಸಿದರು.

andolanait

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

7 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

9 hours ago