DCM DK Shivakumar
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸುತ್ತಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರ ಕಚೇರಿಯಿಂದಲೇ ನೇರವಾಗಿ ಶಾಸಕರಿಗೆ ಮಾಹಿತಿ ಹೋಗಿದೆ. ನನಗೂ ಕಾರ್ಯಕ್ರಮದ ವೇಳಾಪಟ್ಟಿ ಕಳುಹಿಸಿದ್ದಾರೆ. ಅದರಂತೆ ನಾನು ಶಾಸಕರಿಗೆ ವಿಷಯ ತಿಳಿಸುತ್ತಿದ್ದೇನೆ ಎಂದು ಹೇಳಿದರು.
ಇನ್ನು ದಸರಾ ವೇಳೆಗೆ ಮುಖ್ಯಮಂತ್ರಿ ಬದಲಾಗುತ್ತಾರೆ. ನೂತನ ಮುಖ್ಯಮಂತ್ರಿ ದಸರಾ ಉದ್ಘಾಟಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಶೋಕ್ ಜೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ, ನಾನು ಭವಿಷ್ಯ ಕೇಳುವುದಿದೆ. ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು.
ಇನ್ನು ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್ಗೆ ಕಾನೂನು ಪ್ರಕಾರವೇ ಉತ್ತರ ನೀಡುತ್ತೇವೆ. ಆರತಿ ವಿಚಾರಕ್ಕೆ ಯಾರು ಅನುಮತಿ ಕೇಳುತ್ತಿಲ್ಲ. ದಿನಾ ಅಲ್ಲಿ ಆರತಿ, ಪೂಜೆ ನಡೆಯುತ್ತಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…