DCM DK Shivakumar
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸುತ್ತಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರ ಕಚೇರಿಯಿಂದಲೇ ನೇರವಾಗಿ ಶಾಸಕರಿಗೆ ಮಾಹಿತಿ ಹೋಗಿದೆ. ನನಗೂ ಕಾರ್ಯಕ್ರಮದ ವೇಳಾಪಟ್ಟಿ ಕಳುಹಿಸಿದ್ದಾರೆ. ಅದರಂತೆ ನಾನು ಶಾಸಕರಿಗೆ ವಿಷಯ ತಿಳಿಸುತ್ತಿದ್ದೇನೆ ಎಂದು ಹೇಳಿದರು.
ಇನ್ನು ದಸರಾ ವೇಳೆಗೆ ಮುಖ್ಯಮಂತ್ರಿ ಬದಲಾಗುತ್ತಾರೆ. ನೂತನ ಮುಖ್ಯಮಂತ್ರಿ ದಸರಾ ಉದ್ಘಾಟಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಶೋಕ್ ಜೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ, ನಾನು ಭವಿಷ್ಯ ಕೇಳುವುದಿದೆ. ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು.
ಇನ್ನು ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್ಗೆ ಕಾನೂನು ಪ್ರಕಾರವೇ ಉತ್ತರ ನೀಡುತ್ತೇವೆ. ಆರತಿ ವಿಚಾರಕ್ಕೆ ಯಾರು ಅನುಮತಿ ಕೇಳುತ್ತಿಲ್ಲ. ದಿನಾ ಅಲ್ಲಿ ಆರತಿ, ಪೂಜೆ ನಡೆಯುತ್ತಿದೆ ಎಂದು ಹೇಳಿದರು.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…