Randeep Singh Surjewala to Hold Talks with Ministers Again on July 17
ಬೆಂಗಳೂರು: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ತಿಂಗಳ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ.
ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಶಾಸಕರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸುಲಭವಾಗಿ ಲಭ್ಯವಿದ್ದರು. ಅದರ ಹೊರತಾಗಿ ಸುರ್ಜೇವಾಲ ಸಭೆ ನಡೆಸಿದ್ದೇಕೆ?, ಇದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಅನುಪಸ್ಥಿತಿಯನ್ನು ಪ್ರಸ್ತಾಪಿಸಿದಂತಾಯಿತಲ್ಲವೇ? ಎಂಬ ಟೀಕೆಗಳು ಕೇಳಿಬಂದಿವೆ.
ಶಾಸಕರ ಜೊತೆ ಚರ್ಚೆ ನಡೆಸಿದ್ದಕ್ಕಷ್ಟೇ ಸೀಮಿತವಾಗದೆ ಸುರ್ಜೇವಾಲ ಈಗ ಸಚಿವರ ಜೊತೆ ಪ್ರತ್ಯೇಕ ಸಮಾಲೋಚನೆಯಲ್ಲಿ ಮುಂದಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…