Randeep Singh Surjewala to Hold Talks with Ministers Again on July 17
ಬೆಂಗಳೂರು: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ತಿಂಗಳ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ.
ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಶಾಸಕರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸುಲಭವಾಗಿ ಲಭ್ಯವಿದ್ದರು. ಅದರ ಹೊರತಾಗಿ ಸುರ್ಜೇವಾಲ ಸಭೆ ನಡೆಸಿದ್ದೇಕೆ?, ಇದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಅನುಪಸ್ಥಿತಿಯನ್ನು ಪ್ರಸ್ತಾಪಿಸಿದಂತಾಯಿತಲ್ಲವೇ? ಎಂಬ ಟೀಕೆಗಳು ಕೇಳಿಬಂದಿವೆ.
ಶಾಸಕರ ಜೊತೆ ಚರ್ಚೆ ನಡೆಸಿದ್ದಕ್ಕಷ್ಟೇ ಸೀಮಿತವಾಗದೆ ಸುರ್ಜೇವಾಲ ಈಗ ಸಚಿವರ ಜೊತೆ ಪ್ರತ್ಯೇಕ ಸಮಾಲೋಚನೆಯಲ್ಲಿ ಮುಂದಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…