ರಾಜ್ಯ

ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ?: ಆರ್.‌ಅಶೋಕ್‌ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೇವಾಲಾ ಅವರ ಆಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಹೇರಿದೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್‌ಗಳಲ್ಲಿ ಅತೃಪ್ತ ಶಾಸಕರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೇವಾಲಾ ಅವರು ಗುರುವಾದ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ. ಡಿಸಿಎಂ ಡಿಕೆಶಿ ಅವರಿಗೆ ಶಾಸಕರ ಬೆಂಬಲ ಇಲ್ಲ. ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ಅವರಿಗೆ ಶಕ್ತಿ ಇಲ್ಲ.

ಒಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೇ ಕಾಂಗ್ರೆಸ್‌ ಹೈಕಮಾಂಡ್‌ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

54 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

56 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

59 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

1 hour ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago