ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರನಟಿ ರನ್ಯಾರಾವ್ ಅವರ ಕಂಪನಿಗೆ
ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದರು.
ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ ಟಿ ಬಿ ಜಯಚಂದ್ರ ಅವರು ಮಾತನಾಡಿದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟಿ ರನ್ಯಾರಾವ್ ಅವರು ನಿರ್ದೇಶಕಿ ಆಗಿರುವ ಕ್ವಿರೋಡ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ತುಮಕೂರು ಜಿಲ್ಲೆಯ ಸಿರಾದಲ್ಲಿ ಕೆಐಎಡಿಬಿ ವತಿಯಿಂದ 2023ರಲ್ಲಿ 12 ಎಕರೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಆದರೆ ರನ್ಯಾ ರಾವ್ ಅವರು ಕೆಐಎಡಿಬಿ ಜಮೀನಿನ ಖರೀದಿಗೆ ಹಣ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರ ಕಂಪನಿಗೆ ಕೆಐಎಡಿಬಿ ಜಮೀನನ್ನು ನೀಡಿಲ್ಲ ಎಂದು ಟಿಬಿ ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ .
2023 ಜನವರಿಯಲ್ಲಿ 12 ಎಕರೆ ಜಮೀನನ್ನು ರನ್ಯಾ ರಾವ್ ಅವರ ಕಂಪನಿಗೆ ಮಂಜೂರು ಮಾಡಲಾಗಿತ್ತು.
2023 ಮೇ ತಿಂಗಳಲ್ಲಿ ತಾವು ಶಾಸಕರಾದ ನಂತರ ಸ್ಥಳೀಯರಿಗೆ ಕೆಐಎಡಿಬಿ ಜಮೀನು ನೀಡಬೇಕೆಂದು ನಿರ್ಧಾರ ಕೈಗೊಂಡಿರುವುದರಿಂದ ಟಿ.ಬಿ ಜಯಚಂದ್ರ ಅವರು ಇದೇ ವೇಳೆ ತಿಳಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…