ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರನಟಿ ರನ್ಯಾರಾವ್ ಅವರ ಕಂಪನಿಗೆ
ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದರು.
ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ ಟಿ ಬಿ ಜಯಚಂದ್ರ ಅವರು ಮಾತನಾಡಿದರು.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟಿ ರನ್ಯಾರಾವ್ ಅವರು ನಿರ್ದೇಶಕಿ ಆಗಿರುವ ಕ್ವಿರೋಡ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ತುಮಕೂರು ಜಿಲ್ಲೆಯ ಸಿರಾದಲ್ಲಿ ಕೆಐಎಡಿಬಿ ವತಿಯಿಂದ 2023ರಲ್ಲಿ 12 ಎಕರೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಆದರೆ ರನ್ಯಾ ರಾವ್ ಅವರು ಕೆಐಎಡಿಬಿ ಜಮೀನಿನ ಖರೀದಿಗೆ ಹಣ ಪಾವತಿ ಮಾಡಿರಲಿಲ್ಲ. ಹೀಗಾಗಿ ಅವರ ಕಂಪನಿಗೆ ಕೆಐಎಡಿಬಿ ಜಮೀನನ್ನು ನೀಡಿಲ್ಲ ಎಂದು ಟಿಬಿ ಜಯಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ .
2023 ಜನವರಿಯಲ್ಲಿ 12 ಎಕರೆ ಜಮೀನನ್ನು ರನ್ಯಾ ರಾವ್ ಅವರ ಕಂಪನಿಗೆ ಮಂಜೂರು ಮಾಡಲಾಗಿತ್ತು.
2023 ಮೇ ತಿಂಗಳಲ್ಲಿ ತಾವು ಶಾಸಕರಾದ ನಂತರ ಸ್ಥಳೀಯರಿಗೆ ಕೆಐಎಡಿಬಿ ಜಮೀನು ನೀಡಬೇಕೆಂದು ನಿರ್ಧಾರ ಕೈಗೊಂಡಿರುವುದರಿಂದ ಟಿ.ಬಿ ಜಯಚಂದ್ರ ಅವರು ಇದೇ ವೇಳೆ ತಿಳಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…