ರಾಜ್ಯ

ಚಿನ್ನ ಕಳ್ಳಸಾಗಣೆ ಕೇಸ್‌ | ರನ್ಯಾಗೆ ರಾಜಕೀಯ ನಂಟು ; ನಟಿ ಕಂಪನಿಗೆ 12 ಎಕರೆ ಜಮೀನು ಮಂಜೂರು ?

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‍ಗೂ ಕರ್ನಾಟಕ ರಾಜಕೀಯ ವ್ಯಕ್ತಿಗಳಿಗೂ ದೊಡ್ಡ ನಂಟಿರುವುದು ತನಿಖೆಯಿಂದ ಗೊತ್ತಾಗಿದೆ.

ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಮತ್ತು ರಷಬ್ ಇಬ್ಬರು ಕೂಡ ಕಂಪನಿಯ ನಿರ್ದೇಶಕರು. ರನ್ಯಾ ಅವರ ಸೇರಿದೆ ಎನ್ನಲಾದ ಕ್ರಿಸೋರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯ ನಿರ್ದೇಶಕಿಯಾಗಿದ್ದಾರೆ.

ಈ ಕಂಪನಿಗೆ 2023 ರಲ್ಲಿ ಕೆಐಎಡಿಬಿಯಿಂದ ಬರೋಬ್ಬರಿ 12 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಸರ್ಕಾರ ಜಮೀನು ಮಂಜೂರು ಮಾಡಿರುವ ದಾಖಲೆಯಿದೆ. ಒಬ್ಬ ನಟಿ, ನಿರ್ದೇಶಕಿಯಾಗಿರುವ ಕಂಪನಿಗೆ 12 ಎಕರೆ ಜಮೀನು ಮಂಜೂರಾಗಿದ್ದು ಹೇಗೆ ಎಂಬ ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ರನ್ಯಾ ರಾವ್ ಕಂಪನಿಗೆ ಫಟಾಫಟ್ ಭೂಮಿ ಮಂಜೂರಾಗಿದೆಯೇ ಎಂಬ ಗುಮಾನಿಯು ಮೂಡಿದೆ. ರಾಜಕಾರಣಿಯೊಬ್ಬರ ಕೃಪಾಕಟಾಕ್ಷದಿಂದ ಬರೋಬ್ಬರಿ 12 ಎಕರೆ ಕೆಐಎಡಿಬಿ ಲ್ಯಾಂಡ್ ಮಂಜೂರಾಗಿದೆ. ತುಮಕೂರಿನ ಶಿರಾದಲ್ಲಿ ಸ್ಟೀಲ್ ಕಂಪನಿಗೆ ಜಮೀನು ಮಂಜೂರಾಗಿದೆ.

ಕಂಪನಿ ಸ್ಥಾಪನೆಯಾದ 9 ತಿಂಗಳಲ್ಲೇ ಸರ್ಕಾರ ಭೂಮಿ ಕೊಟ್ಟಿದೆ. 2022ರ ಏಪ್ರಿಲ್‍ನಲ್ಲಿ ಕಂಪನಿ ಸ್ಥಾಪನೆಯಾಯಿತು. 2023 ಜನವರಿಯಲ್ಲಿ ಭೂಮಿ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ರನ್ಯಾ ರಾವ್‍ಗಾಗಿ ಫೈಲ್ ಸ್ಪೀಡ್ ಅಪ್ ಆಗಿದ್ಯಾ? ರನ್ಯಾ ಹಿಂದಿರುವ ಆ ರಾಜಕಾರಣಿ ಯಾರು ಎಂಬ ಪ್ರಶ್ನೆ ಮೂಡಿದೆ.

ಏನಿದು ಪ್ರಕರಣ?
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಾ.3ರ ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಬಂದಿಳಿದ ನಟಿ ರನ್ಯಾ ರಾವ್‌ ಅವರನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ತಪಾಸಣೆ ಮಾಡಿದಾಗ 12 ಕೋಟಿ ರೂ ಮೌಲ್ಯದ 14.8ಕೆ.ಜಿ ತೂಕದ ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿದ್ದವು. ಒಟ್ಟಾರೆ ನಟಿ ರನ್ಯಾ ಅವರಿಂದ 17.16 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿ, ಅವುಗಳನ್ನು ವಶಕ್ಕೆ ಪಡೆದ ಡಿಆರ್‌ಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ಅಲ್ಲದೇ, ಇದೀಗ ಈ ಪ್ರಕರಣದಲ್ಲಿ ಸಿಬಿಐ ಸಹ ಎಂಟ್ರಿಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

5 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

10 mins ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

13 mins ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

17 mins ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

22 mins ago

ವಾಣಿಜ್ಯ ಅನಿಲ ಅಭಾವ : ಕೆಲ ಹೋಟೆಲ್‌ಗಳು ಬಂದ್

ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…

45 mins ago