ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯ ಪುತ್ರಿ ರನ್ಯಾ ರಾವ್ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಪೊಲೀಸ್ ಇಲಾಖೆಯಿಂದ ಆಂತರಿಕೆ ವರದಿ ಕೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಆಗುತ್ತದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಅವರು ಖಚಿತ ಮಾಹಿತಿ ನೀಡಬೇಕು. ಅಲ್ಲಿಯವರೆಗೂ ನಾನು ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಈ ವಿಷಯವನ್ನು ಪೊಲೀಸ್ ಮುಖ್ಯಸ್ಥರೊಂದಿಗೆ ಚರ್ಚೆ ಮಾಡಿದ್ದೇನೆ. ಇಲಾಖೆಯು ಕೂಡ ಪರಿಶೀಲನೆ ನಡೆಸುವಂತೆ ಸೂಚಿಸಿದೆ. ಅವರು ಖಂಡಿತವಾಗಿಯೂ ಕೆಲವು ಮಾಹಿತಿಯನ್ನು ಪಡೆಯುತ್ತಾರೆ ಎಂದರು.