ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯು ನಾಳೆಗೆ ಮೂಂದೂಡಿಕೆಯಾಗಿದೆ.
ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.
ನಟಿ ರನ್ಯಾ ರಾವ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್ಐ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು. ಬಳಿಕ ತನಿಖಾಧಿಕಾರಿ ನಾಗೇಶ್ವರ ರಾವ್ ಆಕ್ಷೇಪಣೆ ಸಲ್ಲಿಸಿದ್ದರು. ಬಳಿಕ ವಿಚಾರಣೆಯನ್ನು ನಾಳೆಗೆ ಮೂಂದೂಡಿತು.





