Categories: ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಸರ್ಕಾರಿ ವಾಹನದಲ್ಲೇ ಚಿನ್ನ ಸಾಗಾಟ?

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಅಧಿಕಾರಿಗಳ ತನಿಖೆ ವೇಳೆ ರನ್ಯಾರಾವ್‌ ಅವರು ಗೋಲ್ಡ್‌ ಅನ್ನು ಅಕ್ರ​ಮವಾಗಿ ವಿಮಾನ ನಿಲ್ದಾಣದಿಂದ ಹೇಗೆ ಸಾಗಿಸುತ್ತಿದ್ದಳು ಎಂಬುವುದು ಪತ್ತೆಹಚ್ಚಿದ್ದಾರೆ. ಅಂದ ಹಾಗೇ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ನಟಿ ರನ್ಯಾ ರಾವ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದರು ಎಂಬುದು ಡಿಆರ್​ಐ ತನಿಖೆ ವೇಳೆ ಬಹಿರಂಗವಾಗಿದೆ ಎನ್ನಲಾಗುತ್ತಿದೆ.

ಇನ್ನು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಐಪಿಎಸ್‌ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಕಾರುಗಳನ್ನು ನೀಡಲಾಗುತ್ತದೆ. ಈ ಕಾರಿನಲ್ಲಿ ಪೊಲೀಸ್‌ ಅಧಿಕಾರಿಯ ಕುಟುಂಬ ವರ್ಗದವರು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿರುತ್ತದೆ. ಅಂತೆಯೇ ಡಿಜಿಪಿ ರಾಮಚಂದ್‌ ರಾವ್‌ ಅವರಿಗೂ ಸಹ ಸರ್ಕಾರದಿಂದ ಹೆಚ್ಚುವರಿ ಕಾರು ನೀಡಲಾಗಿತ್ತು. ಹೀಗಾಗಿ ಈ ವಾಹನದಲ್ಲಿಯೇ ರನ್ಯಾ ಬೆಂಗಳೂರು ವಿಮಾನ ನಿಲ್ದಾಣದಿಂದ ಚಿನ್ನವನ್ನು ಸಾಗಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೆ ನೋಟಿಸ್‌ ಜಾರಿ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ವಿಚಾರವಾಗಿ ಸಿಬಿಐ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರೋಟೋಕಾಲ್ ಸಿಬ್ಬಂದಿಗಳಾದ ಮಹಾಂತೇಶ್‌, ಬಸವರಾಜು ಹಾಗೂ ವೆಂಕಟರಾಜು ಎಂಬುವವರಿಗೆ ನೋಟಿಸ್‌ ಜಾರಿ ಮಾಡಿ ಶನಿವಾರ ವಿಚಾರಣೆ ಹಾಜರಾಗುಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

2 hours ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

2 hours ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

2 hours ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ನೆನಪಿನಂಗಳದಲ್ಲಿ ಗಾಜನೂರು

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…

3 hours ago

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

3 hours ago