Categories: ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಸರ್ಕಾರಿ ವಾಹನದಲ್ಲೇ ಚಿನ್ನ ಸಾಗಾಟ?

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಅಧಿಕಾರಿಗಳ ತನಿಖೆ ವೇಳೆ ರನ್ಯಾರಾವ್‌ ಅವರು ಗೋಲ್ಡ್‌ ಅನ್ನು ಅಕ್ರ​ಮವಾಗಿ ವಿಮಾನ ನಿಲ್ದಾಣದಿಂದ ಹೇಗೆ ಸಾಗಿಸುತ್ತಿದ್ದಳು ಎಂಬುವುದು ಪತ್ತೆಹಚ್ಚಿದ್ದಾರೆ. ಅಂದ ಹಾಗೇ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ನಟಿ ರನ್ಯಾ ರಾವ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದರು ಎಂಬುದು ಡಿಆರ್​ಐ ತನಿಖೆ ವೇಳೆ ಬಹಿರಂಗವಾಗಿದೆ ಎನ್ನಲಾಗುತ್ತಿದೆ.

ಇನ್ನು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಐಪಿಎಸ್‌ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಕಾರುಗಳನ್ನು ನೀಡಲಾಗುತ್ತದೆ. ಈ ಕಾರಿನಲ್ಲಿ ಪೊಲೀಸ್‌ ಅಧಿಕಾರಿಯ ಕುಟುಂಬ ವರ್ಗದವರು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿರುತ್ತದೆ. ಅಂತೆಯೇ ಡಿಜಿಪಿ ರಾಮಚಂದ್‌ ರಾವ್‌ ಅವರಿಗೂ ಸಹ ಸರ್ಕಾರದಿಂದ ಹೆಚ್ಚುವರಿ ಕಾರು ನೀಡಲಾಗಿತ್ತು. ಹೀಗಾಗಿ ಈ ವಾಹನದಲ್ಲಿಯೇ ರನ್ಯಾ ಬೆಂಗಳೂರು ವಿಮಾನ ನಿಲ್ದಾಣದಿಂದ ಚಿನ್ನವನ್ನು ಸಾಗಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೆ ನೋಟಿಸ್‌ ಜಾರಿ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ವಿಚಾರವಾಗಿ ಸಿಬಿಐ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರೋಟೋಕಾಲ್ ಸಿಬ್ಬಂದಿಗಳಾದ ಮಹಾಂತೇಶ್‌, ಬಸವರಾಜು ಹಾಗೂ ವೆಂಕಟರಾಜು ಎಂಬುವವರಿಗೆ ನೋಟಿಸ್‌ ಜಾರಿ ಮಾಡಿ ಶನಿವಾರ ವಿಚಾರಣೆ ಹಾಜರಾಗುಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

7 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

7 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

7 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago